ಹಂಸಲೇಖ
ಹಂಸಲೇಖ

'ಶಂಕುತಲೆ' ಸಿನಿಮಾಕ್ಕೆ ಹೊಸ ಹಿರೋಯಿನ್ ಹುಡುಕಾಟದಲ್ಲಿ ಹಂಸಲೇಖ!

ಕನ್ನಡ ಚಿತ್ರರಂಗದ ನಾದಬ್ರಹ್ಮ ಎಂದೇ ಖ್ಯಾತಿಯಾಗಿರುವ ಸಂಗೀತ ನಿರ್ದೇಶಕ ಹಂಸಲೇಖ ಈಗ ನಿರ್ದೇಶಕರಾಗುತ್ತಿದ್ದಾರೆ.

ಕನ್ನಡ ಚಿತ್ರರಂಗದ ನಾದಬ್ರಹ್ಮ ಎಂದೇ ಖ್ಯಾತಿಯಾಗಿರುವ ಸಂಗೀತ ನಿರ್ದೇಶಕ ಹಂಸಲೇಖ ಈಗ ನಿರ್ದೇಶಕರಾಗುತ್ತಿದ್ದಾರೆ.  

'ಶಂಕುತಲೆ' ಸಿನಿಮಾದ ನಿರ್ದೇಶನದ ಜವಾಬ್ದಾರಿ ತೆಗೆದುಕೊಂಡಿದ್ದು, ಸರಿಗಮಪ ಮ್ಯೂಸಿಕ್ ರಿಯಾಲಿಟಿ ಶೋನಿಂದ ಸ್ವಲ್ಪ ಬಿಡುವು ಮಾಡಿಕೊಂಡಿದ್ದು, ಸಿನಿಮಾದ ಕೆಲಸವನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ. ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಈ ಸಿನಿಮಾ ಮೂಡಿಬರಲಿದೆ.

ಸಿಟಿ ಎಕ್ಸ್ ಪ್ರೆಸ್ ಗೆ ಈ ವಿಷಯ ತಿಳಿಸಿದ ಹಂಸಲೇಖ, ಇದು ಭಾರತದ ಮೊದಲ ಕಾಲ್ಪನಿಕಾ ಕಥೆ ಸಿನಿಮಾ ಆಗಿದೆ. ಶಕುಂತಲೆ ಸಿನಿಮಾದಲ್ಲಿ ಸಂಗೀತ ಹಾಗೂ ಗ್ರಾಫಿಕ್ಸ್ ಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಸಂಗೀತ ಹಾಗೂ ಗ್ರಾಫಿಕ್ ಕೆಲಸ ಎರಡು ತಿಂಗಳಿನಿಂದ ವಿಳಂಬವಾಗುತ್ತಿದೆ. ಮುಂದಿನ ಕೆಲ ವಾರಗಳಲ್ಲಿ ಈ ಕೆಲಸವನ್ನು ಪೂರ್ಣಗೊಳಿಸುತ್ತೇನೆ. ಇದಾದ ಒಂದೂವರೆ ತಿಂಗಳ ಬಳಿಕ ಕಲಾವಿದರೊಂದಿಗೆ ಚಿತ್ರೀಕರಣ ಆರಂಭಿಸುತ್ತೇನೆ ಎಂದು ಹೇಳಿದರು.

ಈ ಚಿತ್ರದಲ್ಲಿ ಶಕುಂತಲೆ ಪಾತ್ರದಲ್ಲಿ ಯಾರೂ ಕಾಣಿಸಿಕೊಳ್ಳಲಿದ್ದಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಡಿಸೆಂಬರ್ 9 ಅಥವಾ 12 ರಂದು ಈ ಕುತೂಹಲವನ್ನು ಬಹಿರಂಗಪಡಿಸುವುದಾಗಿ ಹಂಸಲೇಖ ಹೇಳಿದ್ದಾರೆ.  ಐಶ್ವರ್ಯಾ ರೈ ಬಚ್ಚನ್, ದೀಪಿಕಾ ಪಡುಕೋಣೆ,  ಮಾಧುರಿ ಧೀಕ್ಷಿತ್,  ಅನುಷ್ಕಾ ಮತ್ತಿತರ ಹೆಸರು ಕೇಳಿಬರುತ್ತಿದೆ.

ಶಕುಂತಲೆ ಸಿನಿಮಾದಲ್ಲಿ ಬಹು ದೊಡ್ಡ ತಾರಾಗಣವಿರಲಿದೆ. ಆದರೆ, ಮುಖ್ಯ ಪಾತ್ರ ಹೊಸ ಮುಖವಾಗಿರುತ್ತದೆ ಎಂದು ಹಂಸಲೇಖ ತಿಳಿಸಿದರು.

Related Stories

No stories found.

Advertisement

X
Kannada Prabha
www.kannadaprabha.com