ಬೆಂಗಳೂರು: "ರಾಮ್ ಲೀಲಾ ಬಳಿಕ ನಟ ಚಿರಂಜೀವಿ ಸರ್ಜಾ ಹಾಗೂ ನಿರ್ದೇಶಕ ವಿಜಯ್ ಕಿರಣ್ ಮತ್ತೆ ಒಂದಾಗಿದ್ದಾರೆ. ಚಿರಂಜೀವಿ ಅವರ ಮುಂದಿನ ಚಿತ್ರವನ್ನು ಉದಯ್ ಕೆ ಮೆಹ್ತಾ ನಿರ್ಮಾಣ ಮಾಡುತ್ತಿದ್ದು ಇದಕ್ಕೆ ವಿಜಯ್ ಆಕ್ಷನ್ ಕಟ್ ಹೇಳಲಿದ್ದಾರೆ. ಚಿತ್ರದ ಮಹೂರ್ತ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿದ್ದು ಆ ವೇಳೆಗೆ ಚಿತ್ರತಂಡ ಚಿತ್ರದ ಟೈಟಲ್ ತೀಸರ್ ಅನ್ನು ಬಿಡುಗಡೆಗೊಳಿಸುವ ಯೋಜನೆಯನ್ನು ಹಾಕಿಕೊಂಡಿದೆ.