ಈ ಬಗ್ಗೆ ಮಾಧ್ಯಮವೊಂದು ವರದಿ ಮಾಡಿದ್ದು, ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಸೀಮಂತ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಗೌಡ್ರ ಸಂಪ್ರದಾಯದಂತೆ ಮಧ್ಯಾಹ್ನ ಸೀಮಂತ ಶಾಸ್ತ್ರ ನಡೆಯಲಿದ್ದು, ಸೀಮಂತದ ಫಂಕ್ಷನ್ ಗೆ ಸ್ಯಾಂಡಲ್ ವುಡ್ ಸ್ಟಾರ್ ನಟರೂ ಸೇರಿದಂತೆ ಖ್ಯಾತನಾಮ ಕಲಾವಿದರು ಭಾಗಿ ಆಗಲಿದ್ದಾರೆ. ಈಗಾಗಲೇ ರಾಧಿಕಾ ಹಾಗೂ ಯಶ್ ತಾಜ್ ವೆಸ್ಟೆಂಡ್ ಗೆ ಆಗಮಿಸಿದ್ದು, ಮದುವೆ ಆದ ಸ್ಥಳದಲ್ಲೇ ಸೀಮಂತ ಶಾಸ್ತ್ರ ನಡೆಯುತ್ತಿದೆ.