ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಪರಮೇಶ್ವರ್ ತಮಗೆ ಸಿಎಂ ಆಗುವ ಸಾಮರ್ಥ್ಯವಿದೆ ಎಂಬ ಬಗ್ಗೆ ತಿಳಿಸಿದ್ದಾರೆ, ಕಾಂಗ್ರೆಸ್ ನಲ್ಲಿ ಹಲವು ನಾಯಕರುಗಳಿಗೆ ಸಿಎಂ ಆಗುವ ಅರ್ಹತೆಯಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಹೈಕಮಾಂಡ್ ಮತ್ತು ಕಾಂಗ್ರೆಸ್ ಶಾಸಕರು ನಿರ್ಧರಿಸಲಿದ್ದಾರೆ ಎಂದು ಹೇಳಿದ್ದಾರೆ.