ತಂದೆಯ ಹೆಸರಲ್ಲಿ ಸ್ಯಾಂಡಲ್‍ವುಡ್‍ಗೆ ಕಾಲಿಟ್ಟಿದ ನವ ನಟನಿಂದ ಗೂಂಡಗಿರಿ!

ಸ್ಯಾಂಡಲ್‍ವುಡ್‍ನ ಖ್ಯಾತ ನಿರ್ಮಾಪಕ ಹಾಗೂ ಕನ್ನಡ ಹೋರಾಟಗಾರರಾದ ಸಾರಾ ಗೋವಿಂದು ಪುತ್ರ ಗೂಂಡಾಗಿರಿ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ...
ಅನೂಪ್
ಅನೂಪ್
ಬೆಂಗಳೂರು: ಸ್ಯಾಂಡಲ್‍ವುಡ್‍ನ ಖ್ಯಾತ ನಿರ್ಮಾಪಕ ಹಾಗೂ ಕನ್ನಡ ಹೋರಾಟಗಾರರಾದ ಸಾರಾ ಗೋವಿಂದು ಪುತ್ರ ಗೂಂಡಾಗಿರಿ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. 
ಸಾರಾ ಗೋವಿಂದ್ ಅವರ ಪುತ್ರ ನಟ ಅನೂಪ್ ವಿರುದ್ಧ ಈ ಆರೋಪ ಕೇಳಿಬಂದಿದೆ. ಸಾರಾ ಗೋವಿಂದು ಮನೆಯ ಕಾರು ಚಾಲಕನ ಮೇಲೆ ಅನೂಪ್ ಹಲ್ಲೆ ಮಾಡಿದ್ದಾರೆ. 
ದೀಪಾವಳಿ ಹಬ್ಬಕ್ಕೆ ಸಂಬಳ ನೀಡದ ಹಿನ್ನೆಲೆಯಲ್ಲಿ ಕೆಲಸಕ್ಕೆ ಹೋಗದ್ದಕ್ಕೆ ಈ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಕಾರು ಚಾಲಕ ಹರೀಶ್ ನನ್ನು ಬಸವೇಶ್ವರನಗರಕ್ಕೆ ಕರೆಸಿಕೊಂಡು ಫರಿಸ್ತಾ ಕೆಫೆ ಮುಂಭಾಗದಲ್ಲಿ ಪ್ರಭಾಕರ್ ಮತ್ತು ಸತ್ಯ ಎಂಬುವರ ಜತೆ ಸೇರಿ ಅನೂಪ್ ಹರೀಶ್ ಮೇಲೆ ಹಲ್ಲೆ ನಡೆಸಿದ್ದಾರೆ. 
ಅಲ್ಲದೆ ಈ ವಿಚಾರ ಹೊರಗಡೆ ಯಾರಿಗಾದರೂ ಹೇಳಿದರೆ ನಿನ್ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಹಲ್ಲೆಗೊಳಗಾದ ಹರೀಶ್ ಆರೋಪಿಸಿದ್ದಾರೆ. ಹಲ್ಲೆಯಿಂದ ಗಾಯಗೊಂಡಿರುವ ಹರೀಶ್ ಸದ್ಯ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 
ಡವ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಅನೂಪ್ ನಂತರ ಮಿಸ್ಟರ್ ಪರ್ಫೆಕ್ಟ್, ಸಾಗುವ ದಾರಿಯಲ್ಲಿ ಚಿತ್ರಗಳಲ್ಲಿ ನಟಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com