ನಟ ಅಂಬರೀಷ್ ಗೆ 'ಮಂಡ್ಯದ ಗಂಡು' ಎಂಬ ಬಿರುದು ಕೊಟ್ಟಿದ್ದು ಯಾರು ಗೊತ್ತೇ?

ರೆಬೆಲ್ ಸ್ಟಾರ್ ಅಂಬರೀಷ್ ಗೆ ಮಂಡ್ಯದ ಗಂಡು ಬಿರುದು ಕೊಟ್ಟಿದ್ದು ನಾನೆ. ಅವರ ಸಾವು ನನಗೆ ನೋವು ತಂದಿದೆ. ಅವರದ್ದು ಇನ್ನು ಚಿಕ್ಕ ವಯಸ್ಸು ಎಂದು ಮಾಜಿ ಸಂಸದ, ...
ರೆಬೆಲ್ ಸ್ಟಾರ್ ಅಂಬರೀಷ್
ರೆಬೆಲ್ ಸ್ಟಾರ್ ಅಂಬರೀಷ್
Updated on
ಮಂಡ್ಯ:  ರೆಬೆಲ್ ಸ್ಟಾರ್ ಅಂಬರೀಷ್ ಗೆ ಮಂಡ್ಯದ ಗಂಡು ಬಿರುದು ಕೊಟ್ಟಿದ್ದು ನಾನೆ. ಅವರ ಸಾವು ನನಗೆ ನೋವು ತಂದಿದೆ. ಅವರದ್ದು ಇನ್ನು ಚಿಕ್ಕ ವಯಸ್ಸು ಎಂದು ಮಾಜಿ ಸಂಸದ, ಕಾವೇರಿ ನೀರಾವರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ. ಮಾದೇಗೌಡ ಅಂಬಿ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಅಂಬರೀಷ್​ ಅವರು ಮೃದು ಸ್ವಭಾವದ ವ್ಯಕ್ತಿ. ಅವರ ಜತೆ ತುಂಬಾ ಒಡನಾಟ ಹೊಂದಿದ್ದೆ. ಅಲ್ಲದೆ, ಅವರ ತಂದೆಯೊಂದಿಗೂ ನನಗೆ ಒಡನಾಟವಿತ್ತು. ಅವರು ರಾಜಕೀಯವಾಗಿಯೂ ಹೆಸರು ಮಾಡಿದ್ದರು. ಅವರ ಸಾವಿನಿಂದ ರಾಜ್ಯಕ್ಕೆ, ದೇಶಕ್ಕೆ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.
ರಾಜಕೀಯದಲ್ಲಿ ಸಚಿವರಾಗಿಯೂ ಅಂಬಿ ಹೆಸರು ಮಾಡಿದ್ದರು. ಅವರು ನಮ್ಮ ಊರಿನವರು. ಹಾಗಾಗಿ ಅವರ ಕುಟುಂಬದ ಜತೆ ಒಡನಾಟ ಇತ್ತು ಎಂದು ಮಾದೇಗೌಡ ಸ್ಮರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com