ಮೂಳೆಗೆ ಸಂಬಂಧಿಸಿದ ಕಾಯಿಲೆಯಿಂದ ನರಳುತ್ತಿರುವ ರಮ್ಯಾ ಅಂಬರೀಷ್ ಅವರ ಅಂತ್ಯಕ್ರಿಯೆಗೆ ಹಾಜರಾಗಿಲ್ಲ ಎಂದು ಹೇಳಲಾಗುತ್ತಿದೆ, ರಮ್ಯಾ ಅವರು ಕಳೆದ ಒಂದು ತಿಂಗಳಿನಿಂದ ಅನಾರೋಗ್ಯಕ್ಕೆ ತುತ್ತಾಗಿರುವುದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದು, ಈಗ ನನ್ನ ಕಾಲು ಗೆಡ್ಡೆ ಮತ್ತು ಕ್ಯಾನ್ಸರ್ ಮುಕ್ತವಾಗಿದೆ. ಆದರೆ, ಕೆಲವು ದಿನಗಳವರೆಗೆ ನಾನು ವಿಶ್ರಾಂತಿಯಲ್ಲಿ ಇರಬೇಕಿದೆ. ಮತ್ತೆ ದೈಹಿಕ ಪರೀಕ್ಷೆಗೆ ಒಳಪಡಬೇಕಾಗಿದೆ. ದೇಹದ ಯಾವುದೇ ಭಾಗದಲ್ಲಿ ನೋವು ಕಾಣಿಸಿಕೊಂಡರೇ ಅದನ್ನು ನಿರ್ಲಕ್ಷ್ಯಿಸಬೇಡಿ, ಕೂಡಲೇ ವೈದ್ಯರ ಬಳಿ ಹೋಗಿ ಪರೀಕ್ಷಿಸಿಕೊಳ್ಳಿ ಎಂದು ಸಲಹೆ ಪೋಸ್ಟ್ ನಲ್ಲಿ ಸಲಹೆ ನೀಡಿದ್ದಾರೆ.