ಅನಿರುದ್ಧ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಕುಮಾರ ಸ್ವಾಮಿ, ಕಲಾವಿದರು ಮಾಡಿದ ಕೆಲಸಕ್ಕೆ ಸರ್ಕಾರ ಗೌರವ ಕೊಟ್ಟಿದ್ದೇವೆ .ವಿಷ್ಣುವರ್ಧನ್ ಅವರು ನಿಧನರಾದಾಗ ನಾನು ಸಿಎಂ ಆಗಿರಲಿಲ್ಲ. ನಿಧನದ ಸುದ್ದಿ ತಿಳಿದಾಗ ನಾನು ಅವರ ಮನೆಗೆ ಹೋಗಿ ದರ್ಶನ ಪಡೆದಿದ್ದೇನೆ. ಆ ವೇಳೆ ಭಾರತಿ ವಿಷ್ಣುವರ್ಧನ್ ಮತ್ತು ನಟ ಶಿವರಾಂ ಅವರಲ್ಲಿ ಅಂತ್ಯಕ್ರಿಯೆ ಸಿದ್ಧತೆ ಬಗ್ಗೆ ಕೇಳಿದ್ದೇನೆ.