ನಿನ್ನೆ ರಾತ್ರಿ ಪತ್ರಿಕಾಗೋಷ್ಠಿ ನಡೆಸಿ, ನಾಗರತ್ನ ವಿರುದ್ಧ ದುನಿಯಾ ವಿಜಯ್ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ ನಾಗರತ್ನ ಅವರು, ಚಿನ್ನದ ಮೊಟ್ಟೆ ಇಡೋ ಕೋಳಿ ನೋಡ್ಕೊಂಡು ನಾನು ಬಂದಿಲ್ಲ. ಅದನ್ನು ನೋಡಿ ಬಂದವರು ಇನ್ನೊಬ್ಬರು. ನನಗೆ ಆ ಮಾತನ್ನು ಹೇಳುವುದು ಬೇಡ. ತಂದೆ, ತಾಯಿ ಹೆಸರಿನಲ್ಲಿ ಅನುಕಂಪ ಗಿಟ್ಟಿಸೋದು ಬೇಡ. ನನ್ನ ಮಕ್ಕಳಿಗಾಗಿ ಎಲ್ಲವನ್ನೂ ಸಹಿಸಿಕೊಂಡು ಬಂದಿದ್ದೇನೆ. ವರ್ಷಕ್ಕೆ ಒಂದೊಂದು ಮದುವೆಯಾಗೋದು ಯಾವ ನ್ಯಾಯ ಹೇಳಿ ಎಂದು ವಾಗ್ದಾಳಿ ನಡೆಸಿದರು.