ಹಿರಿಯ ನಟಿ ಲಕ್ಷ್ಮೀ, ನಿರ್ದೇಶಕ ಎಸ್.ನಾರಾಯಣ್'ಗೆ ಜೀವಮಾನ ಸಾಧನೆ ಪ್ರಶಸ್ತಿ

ಚಲನಚಿತ್ರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯ ಸರ್ಕಾರ ನೀಡುವ 2017ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿಗೆ ಹಿರಿಯ ನಟಿ ಲಕ್ಷ್ಮೀ ಹಾಗೂ ನಿರ್ದೇಶಕ ಎಸ್.ನಾರಾಯಣ್, ನಿರ್ಮಾಪಕ, ಜಿ.ಎನ್.ಲಕ್ಷ್ಮೀಪತಿ ಅವರು...
ಹಿರಿಯ ನಟಿ ಲಕ್ಷ್ಮೀ ಮತ್ತು ನಿರ್ದೇಶಕ ಎಸ್.ನಾರಾಯಣ್
ಹಿರಿಯ ನಟಿ ಲಕ್ಷ್ಮೀ ಮತ್ತು ನಿರ್ದೇಶಕ ಎಸ್.ನಾರಾಯಣ್
ಬೆಂಗಳೂರು: ಚಲನಚಿತ್ರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯ ಸರ್ಕಾರ ನೀಡುವ 2017ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿಗೆ ಹಿರಿಯ ನಟಿ ಲಕ್ಷ್ಮೀ ಹಾಗೂ ನಿರ್ದೇಶಕ ಎಸ್.ನಾರಾಯಣ್, ನಿರ್ಮಾಪಕ, ಜಿ.ಎನ್.ಲಕ್ಷ್ಮೀಪತಿ ಅವರು ಆಯ್ಕೆಯಾಗಿದ್ದಾರೆ. 
ಪ್ರಶಸ್ತಿಯು ತಲಾ ರೂ.50 ಗ್ರಾಂ ಚಿನ್ನದ ಪದಕ ಮತ್ತು ಎರಡು ಲಕ್ಷ ನಗದು ಬಹುಮಾನವನ್ನು ಒಳಗೊಂಡಿದೆ. 
2017ನೇ ಸಾಲಿನ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲು ನಟ ಮತ್ತು ನಿರ್ಮಾಪಕ ಜಿ.ಕೆ.ಶ್ರೀನಿವಾಸ ಮೂರ್ತಿಯವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚನೆ  ಮಾಡಲಾಗಿತ್ತು. 
ಇದರಂತೆ ಸೋಮವಾರ ಸಮಿತಿಯ ಸದಸ್ಯರು ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ವರದಿ ಸಲ್ಲಿಸಿದ್ದರು. 
ಡಾ.ರಾಜ್ ಕುಮಾರ್ ಪ್ರಶಸ್ತಿಗೆ ಪಂಚಭಾಷೆ ತಾರೆ ಲಕ್ಷ್ಮೀ, ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿರುವ ನಿರ್ದೇಶಕರಿಗೆ ನೀಡುವ ಪುಟ್ಟಣ ಕಣಗಾಲ್ ಪ್ರಶಸ್ತಿಗಾಗಿ ನಿರ್ದೇಶಕ ಎಸ್.ನಾರಾಯಣ್ ಮತ್ತು ಚಿತ್ರರಂಗದ ವಿವಿಧ ವಲಯದಲ್ಲಿ ಸಾಧನೆ ಮಾಡಿದ ಹಿರಿಯರಿಗೆ ನೀಡುವ ಡಾ.ವಿಷ್ಣುವರ್ಧನ್ ಪ್ರಶಸ್ತಿಯನ್ನು ನಿರ್ಮಾಪಕ ಜಿ.ಎನ್.ಲಕ್ಷ್ಮೀಪತಿಯವರಿಗೆ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com