ಖ್ಯಾತ ನಿರ್ದೇಶಕ ಮಣಿರತ್ನಂ ಅವರಿಗೆ ಬೆದರಿಕೆ ಕರೆ : ಪೊಲೀಸ್ ಭದ್ರತೆ

ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಮಣಿರತ್ನಂ ಅವರಿಗೆ ಕಿಡಿಗೇಡಿಗಳಿಂದ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಚೆನ್ನೈನ ಅಭಿರಾಮಪುರದಲ್ಲಿರುವ ಮಣಿರತ್ನಂ ಅವರ ...
ಮಣಿರತ್ನಂ
ಮಣಿರತ್ನಂ
ಚೆನ್ನೈ:  ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಮಣಿರತ್ನಂ ಅವರಿಗೆ ಕಿಡಿಗೇಡಿಗಳಿಂದ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಚೆನ್ನೈನ ಅಭಿರಾಮಪುರದಲ್ಲಿರುವ ಮಣಿರತ್ನಂ ಅವರ ನಿವಾಸಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
ಈ ಸಂಬಂಧ  ನಿರ್ದೇಶಕ ಮಣಿರತ್ನಂ ದೂರು ದಾಖಲಿಸಿದ್ದಾರೆ.
ಬಾಂಬ್​ಸ್ಕ್ವಾಡ್​​​ಮನೆಯನ್ನು ಪರಿಶೀಲನೆ ಮಾಡಿದ್ದು, ಅವರ ಮನೆ ಹಾಗೂ ಕಚೇರಿಗೆ  ಭದ್ರತೆ ಹೆಚ್ಚಿಸಲಾಗಿದೆ. 
ಮಣಿರತ್ನಂ ಅವರ ಇತ್ತೀಚಿನ ಚೆಕ್ಕ ಚೀವಂತ ವಾನಂ ಚಿತ್ರದಲ್ಲಿನ ವಿವಾದಾತ್ಮಕ ಸಂಭಾಷಣೆಯೇ ಈ ಬಾಂಬ್ ಬೆದರಿಕೆಗೆ ಕಾರಣ ಎಂದು ಹೇಳಲಾಗಿದೆ. ಈ ಸಿನಿಮಾದಲ್ಲಿನ ಕೆಲವು ವಿವಾದಾತ್ಮಕ ಸಂಭಾಷಣೆಗಳನ್ನು ತೆಗೆದು ಹಾಕಬೇಕೆಂದು ಬೆದರಿಕೆ ಹಾಕಲಾಗಿದೆ. 
ಸೆಪ್ಟಂಬರ್ 28 ರಂದು ಬಿಡುಗಡೆಯಾದ ಚೆಕ್ಕ ಚೀವಂತ ವಾನಂ ಚಿತ್ರದಲ್ಲಿ ನಟರಾದ ಅರವಿಂದ ಸ್ವಾಮಿ, ಸಿಂಬು ವಿಜಯ್ ಸೇತುಪತಿ, ಅರುಣ್ ವಿಜಯ್,  ಜ್ಯೋತಿಕಾ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ..

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com