ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರ್ಜುನ್ ಸರ್ಜಾ ನಿರ್ದೇಶಿಸಿ, ನಿರ್ಮಾಣದಲ್ಲಿ ಮೂಡಿ ಬಂದಿದ್ದ ಪ್ರೇಮಬರಹ ಚಿತ್ರಕ್ಕೆ ಮೊದಲು ನಾಯಕರಾಗಿ ನಟ ಚೇತನ್ ಆಯ್ಕೆಯಾಗಿದ್ದರು. ಇದಕ್ಕೆ ಸರ್ಜಾ ಅವರಿಂದ ರೂ.10 ಲಕ್ಷವನ್ನು ಮುಂಗಡ ಪಡೆದಿದ್ದರು. ಆದರೆ, ನಂತರ ನಿರ್ದೇಶಕರಿಗೆ ಚೇತನ್ ಅವರ ನಟನೆ ಸೂಕ್ತವೆನಿಸಿರಲಿಲ್ಲ. ಹೀಗಾಗಿ ಚೇತನ್ ಅವರನ್ನು ಕೈಬಿಡಲಾಗಿತ್ತು.