#MeToo: ಶೃತಿ ಹರಿಹರನ್ ಲಿಖಿತ ರೂಪದಲ್ಲಿ ಕ್ಷಮೆ ಕೇಳಿದರೆ ಮಾತ್ರ ಸಂಧಾನ ಎಂದ ಅರ್ಜುನ್ ಸರ್ಜಾ: ವರದಿ

ಕನ್ನಡ ಚಿತ್ರರಂಗದಲ್ಲಿ ಅಲ್ಲೋಲ-ಕಲ್ಲೋಲಕ್ಕೆ ಕಾರಣವಾಗಿರುವ #MeToo ವಿವಾದಕ್ಕೆ ಸಂಬಂಧಿಸಿದಂತೆ ಬುಧವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಂಧಾನಸಭೆ ನಡೆಯಲಿದ್ದು, ನಾಳಿನ ಸಭೆಗ ನಟ ಅರ್ಜುನ್ ಸರ್ಜಾ ಕೂಡ ಭಾಗಿಯಾಗಲಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಅಲ್ಲೋಲ-ಕಲ್ಲೋಲಕ್ಕೆ ಕಾರಣವಾಗಿರುವ #MeToo ವಿವಾದಕ್ಕೆ ಸಂಬಂಧಿಸಿದಂತೆ ಗುರುವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಂಧಾನಸಭೆ ನಡೆಯಲಿದ್ದು, ನಾಳಿನ ಸಭೆಗ ನಟ ಅರ್ಜುನ್ ಸರ್ಜಾ ಕೂಡ ಭಾಗಿಯಾಗಲಿದ್ದಾರೆ.
ಇನ್ನು ವರದಿಯೊಂದರ ಅನ್ವಯ ನಟ ಅರ್ಜುನ್ ಸರ್ಜಾ ಸಂಧಾನ ಸಭೆಗೆ ಭಾಗಿಯಾಗುವ ಕುರಿತು ನಿರ್ಧರಿಸಿದ್ದಾರೆಯಾದರೂ, ನಟಿ ಶೃತಿ ಹರಿಹರನ್ ಮೀಟೂ ಆರೋಪಕ್ಕೆ ಸಂಬಂಧಿಸಿದಂತೆ ಲಿಖಿತ ರೂಪದಲ್ಲಿ ಬೇಷರತ್ ಕ್ಷಮೆ ಕೇಳಬೇಕು. ಆಗ ಮಾತ್ರ ತಾವು ಸಂಧಾನಕ್ಕೆ ಒಪ್ಪುವುದಾಗಿ ನಟ ಅರ್ಜುನ್ ಸರ್ಜಾ ಹೇಳಿದ್ದಾರೆ ಎಂದು ತಿಳಿದುಬಂದಿದೆ. ಇಲ್ಲವಾದಲ್ಲಿ ತಾವು ಖಂಡಿತಾ ಕಾನೂನು ಕ್ರಮ ಜರುಗಿಸುವುದಾಗಿ ಅರ್ಜುನ್ ಸರ್ಜಾ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನು ನಾಳೆ ನಡೆಯಲಿರುವ ಸಭೆಗೆ ನಟ ಅಂಬರೀಷ್ ನೇತೃತ್ವ ವಹಿಸಿದ್ದು, ನಾಳಿನ ಸಭೆಯಲ್ಲಿ ನಿರ್ಮಾಪಕ ಸಾರಾ ಗೋವಿಂದು, ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ, ಹಿರಿಯ ನಟ ರಾಜೇಶ್ ಸೇರಿದಂತೆ ಹಲವು ನಿರ್ಮಾಪಕ ಮತ್ತು ನಿರ್ದೇಶಕರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com