ಹೆಣ್ಣು ತನಗಾದ ಸಮಸ್ಯೆಯನ್ನು ಹೇಳಿಕೊಂಡಾಗ ಆಕೆಯನ್ನು ದೋಷಿ, ಆಪರಾಧಿ ಸ್ಥಾನದಲ್ಲಿ ನಿಲ್ಲಿಸುವಂಥ ಪರಿಸ್ಥಿತಿ ನಮ್ಮ ಸಮಾಜದಲ್ಲಿ ನಿರ್ಮಾಣವಾಗಿದೆ. ಮಂಡಳಿ ಹಾಗೂ ಹಿರಿಯರಿಗೆ ಗೌರವ ನೀಡಿ ಶುಕ್ರವಾರದವರೆಗೂ ಕಾಯಲು ತೀರ್ಮಾನಿಸಿದ್ದೇನೆ. ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ. ಈ ಬಗ್ಗೆ ಹೆಚ್ಚಿನದೇನೂ ಹೇಳಲ್ಲ. ಆದರೆ ನನಗೆ ತೊಂದರೆಯಾಗಿದೆ. ಹಾಗಾಗಿ ಯಾವುದೇ ಕಾರಣಕ್ಕೂ ಕ್ಷಮೆ ಕೇಳುವುದಿಲ್ಲ ಎಂದು ಎದ್ದು ಹೋದರು.