ತನ್ನ ವಿರುದ್ಧ ಬರುತ್ತಿರುವ 'ಸತ್ಯಕ್ಕೆ ದೂರವಾದ ಮಾತು, ಚರ್ಚೆಗಳಿಗೆ ಕ್ಲಾರಿಫಿಕೇಷನ್ ಕೊಡಬೇಕಿದೆ. ನನಗೆ ಮತ್ತು Mr. ಅರ್ಜುನ್ ಸರ್ಜಾಗೆ ಮಾತ್ರ ಸತ್ಯ ಗೊತ್ತಿದೆ. ಇದು ಅರ್ಜುನ್ ಸರ್ಜಾ ವಿರುದ್ಧ ನಾನು ಎತ್ತಿದ ದನಿ. ನೀವು ಊಹಿಸಿದ ಹಾಗೆ ನನ್ನ ಹಿಂದೆ ಯಾರೂ ಇಲ್ಲ. ನನಗೆ ಹೀಗೆ ಮಾಡಲು ಯಾರೂ ಕುಮ್ಮಕ್ಕು ಕೊಟ್ಟಿಲ್ಲ. ಚೇತನ್, ಪ್ರಕಾಶ್ ರೈ, ಕವಿತಾ ಲಂಕೇಶ್ ಯಾರೊಬ್ಬರು ಇದಕ್ಕೆ ಕಾರಣರಲ್ಲ. ನನ್ನ ಬೆಂಬಲಕ್ಕೆ ನಿಂತವರು ಅವರು, ಅದಕ್ಕಾಗಿ ಕೃತಜ್ಞಳಾಗಿರುತ್ತೇನೆ ಎಂದು ಶೃತಿ ಸ್ಪಷ್ಟಪಡಿಸಿದ್ದಾರೆ.