ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿಯಲ್ಲಿ ಇಂದು ನಡೆದ ಸಭೆ ಬಳಿಕ ಮಾತನಾಡಿದ ನಟ ಅಂಬರೀಶ್ ಅವರು, 'ಇದು ಕೂಡಲೇ ಬಗೆಹರಿಯುವಂತಹ ಪ್ರಕರಣ ಅಲ್ಲ. ಇಬ್ಬರ ಮನಸ್ಸಿಗೂ ನೋವಾಗಿದೆ. ಸಂಧಾನದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸ್ವಲ್ಪ ಸಮಯವಕಾಶ ನೀಡಬೇಕಿದೆ. ಪ್ರಕರಣದ ಒಂದು ಹೆಜ್ಜೆ ಈಗಾಗಲೇ ನ್ಯಾಯಾಲಯದಲ್ಲಿದೆ. ಹಾಗಾಗಿ ತುಂಬಾ ಎಚ್ಚರಿಕೆಯಿಂದ ಎಲ್ಲವನ್ನು ನೋಡಬೇಕಿದೆ. ನಾನು ಹೇಳಿದ್ದು ಒಂದೇ ಮಾತು. ಶೇಖ್ ಹ್ಯಾಂಡ್ ಮಾಡಿ, ಒಬ್ಬರಿಗೊಬ್ಬರು ಮಾತನಾಡಿಸಬೇಡಿ. ಬೇರೆ ಬೇರೆಯಾಗಿ ಹೋಗಿ, ನಿಮ್ಮಿಬ್ಬರ ಮಧ್ಯೆ ನಾನು ಮಾತನಾಡುತ್ತೇನೆ ಎಂದು ಹೇಳಿದ್ದಾರೆ.