ಮೀಟೂ ಆರೋಪ ಎದುರಿಸುತ್ತಿರುವ ನಟ ಅರ್ಜುನ್ ಸರ್ಜಾ ಅವರ ಮ್ಯಾನೇಜರ್ ಶಿವಾರ್ಜುನ್ ಅವರಿಗೆ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿದ್ದು, ಶೃತಿ ಹರಿಹರನ್ ರೊಂದಿಗೆ ತಾನು ಸಂಧಾನ ಮಾಡಿಸುತ್ತೇನೆ. ತನಗೆ 1.5 ಕೋಟಿ ರೂ ನೀಡಿ ಎಂದು ಬೇಡಿಕೆ ಇಟ್ಟಿದ್ದನಂತೆ. ಈ ಬಗ್ಗೆ ಸ್ವತಃ ಅರ್ಜುನ್ ಸರ್ಜಾ ಅವರ ಮ್ಯಾನೇಜರ್ ಶಿವಾರ್ಜುನ್ ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದು, ಈ ವೇಳೆ, 'ನಾನು ಶೃತಿ ಹರಿಹರನ್ ಆಪ್ತ ಎಂದು ಹೇಳಿಕೊಂಡ ವ್ಯಕ್ತಿ, ಆರೋಪವನ್ನು ಮುಚ್ಚಿಹಾಕಲು ಹಾಗೂ ಸಂಧಾನ ಮಾಡಿಕೊಳ್ಳಲು ನಮಗೆ 1.5 ಕೋಟಿ ರೂ. ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾನೆ ಎಂದು ಹೇಳಿದ್ದಾರೆ.