ಅರ್ಜುನ್ ಸರ್ಜಾ ವಿರುದ್ಧ ಶೃತಿ MeToo ಆರೋಪ; ವಿಸ್ಮಯ ಚಿತ್ರ ನಿರ್ಮಾಪಕನಿಂದ ಹೊಸ ಬಾಂಬ್!

ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ಮಯ ಚಿತ್ರ ನಿರ್ಮಾಪಕ ಉದಯ್ ಕುಮಾರ್...
ಶೃತಿ ಹರಿಹರನ್-ಅರ್ಜುನ್ ಸರ್ಜಾ-ಚೇತನ್
ಶೃತಿ ಹರಿಹರನ್-ಅರ್ಜುನ್ ಸರ್ಜಾ-ಚೇತನ್
ಬೆಂಗಳೂರು: ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ಮಯ ಚಿತ್ರ ನಿರ್ಮಾಪಕ ಉದಯ್ ಕುಮಾರ್ ಪೊಲೀಸರ ಮುಂದೆ ತಮ್ಮ ಹೇಳಿಕೆಯನ್ನು ದಾಖಲಿಸಿದ್ದು ಅರ್ಜುನ್ ಸರ್ಜಾ ವಿರುದ್ಧ ಶೃತಿ ಮಾಡಿರುವ ಆರೋಪಗಳನ್ನು ಅಲ್ಲಗಳೆದಿದ್ದಾರೆ. 
ಉದಯ್ ಕುಮಾರ್ ಅವರು ಶೃತಿ ಶೂಟಿಂಗ್ ಸೆಟ್ ಗೆ ಬಂದದ್ದು ಕೇವಲ 9 ದಿನ ಮಾತ್ರ. ಶೃತಿಗೆ 3 ಲಕ್ಷ ರುಪಾಯಿ ಸಂಭಾವನೆ ನೀಡಲಾಗಿತ್ತು. ಶೃತಿ ಆರೋಪಿಸಿದ ಹಾಗೆ ಯಾವುದೇ ಘಟನೆ ಶೂಟಿಂಗ್ ಸೆಟ್ ನಲ್ಲಿ ನಡೆದಿಲ್ಲ. ಚಿತ್ರದ ಶೂಟಿಂಗ್ ಸೆಟ್ ನಲ್ಲಿ ಸುಮಾರು 40 ಜನ ಇರುತ್ತಾರೆ. ಆ ರೀತಿ ನಡೆಯಲು ಸಾಧ್ಯವಿಲ್ಲ ಎಂದರು ಹೇಳಿದರು. 
ಶೃತಿ ಸಾಮಾಜಿಕ ಜಾಲತಾಣದಲ್ಲಿ ಏನೋ ಹೇಳಲು ಹೋಗಿ ಅದಕ್ಕೆ ಈಗ ಸ್ಟಿಕ್ ಆಗಿದ್ದಾರೆ. ವೈಯಕ್ತಿಕ ಪ್ರತಿಷ್ಟೆಗೆ ಬಿದ್ದು ಆರೋಪ ಮಾಡಿದಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ. 
ವಿಸ್ಮಯ ಚಿತ್ರದ ವಿಲನ್ ರೋಲ್ ಗೆ ಮೊದಲು ಚೇತನ್ ರನ್ನು ಆಯ್ಕೆ ಮಾಡಲಾಗಿತ್ತು. ನಂತರ ಜೆಕೆ ಸಾಕಷ್ಟು ಪಾಪುಲರ್ ಆಗಿದ್ದು ಚೇತನ್ ಕೈಬಿಡಲಾಗಿತ್ತು. ಇನ್ನು ಪ್ರೇಮಬರಹ ಚಿತ್ರಕ್ಕೂ ಚೇತನ್ ಹೆಸರು ಕೈಬಿಟ್ಟಿರುವುದರಿಂದ ಚೇತನ್ ಶೃತಿಗೆ ಸಪೋರ್ಟ್ ಮಾಡಿದ್ದಾರೆ ಎಂದು ಉದಯ್ ಕುಮಾರ್ ಪೊಲೀಸರ ಮುಂದೆ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com