ಬೆಂಗಳೂರು : ಕನ್ನಡ ಚಿತ್ರರಂಗದ ಒಗ್ಗಟ್ಟು ಪ್ರದರ್ಶಿಸುವ ಎರಡು ದಿನಗಳ ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ನೀಡಿದರು.
ಮಾಜಿ ಸಚಿವ ಅಂಬರೀಷ್, ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ, ನಟರಾದ ಸುನೀಲ್ ಶೆಟ್ಟಿ, ಪುನೀತ್ ರಾಜ್ ಕುಮಾರ್, ಕ್ರಿಕೆಟಿಗರಾದ ಆಡಂ ಗಿಲ್ ಕ್ರಿಸ್ಟ್, ಹರ್ಷಲ್ ಗಿಬ್ಸ್ ಸೇರಿದಂತೆ ಕಲಾವಿದರು, ತಂತ್ರಜ್ಞರು, ನಟ, ನಟಿಯರು ನಿರ್ದೇಶಕರು ಭಾಗವಹಿಸಿದ್ದರು.
ಕಿಚ್ಚ ಸುದೀಪ್ ಅವರ ಆಸಕ್ತಿಯಿಂದಾಗಿ ಚಲನಚಿತ್ರ ಕಪ್ ಕ್ರಿಕೆಟ್ ಪಂದ್ಯಾವಳಿ ರೂಪುಗೊಂಡಿದ್ದು, ಎರಡನೇ ಬಾರಿ ಪಂದ್ಯಾವಳಿ ನಡೆಯುತ್ತಿದೆ.
Advertisement