ಭೀಕರ ಅಪಘಾತ: ಕಿರುತೆರೆ ನಟಿ ಭಾರ್ಗವಿ ಮತ್ತು ಅನುಷಾ ದುರ್ಮರಣ

ಕಾರು ರಸ್ತೆ ಬದಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಿರುತೆರೆ ನಟಿ ಭಾರ್ಗವಿ ಮತ್ತು ಅನುಷಾ ದಾರುಣ ಸಾವನ್ನಪ್ಪಿದ್ದಾರೆ.
ಭಾರ್ಗವಿ
ಭಾರ್ಗವಿ
Updated on
ಕಾರು ರಸ್ತೆ ಬದಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಿರುತೆರೆ ನಟಿ ಭಾರ್ಗವಿ ಮತ್ತು ಅನುಷಾ ದಾರುಣ ಸಾವನ್ನಪ್ಪಿದ್ದಾರೆ.
ಶೂಟಿಂಗ್ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದಾಗ ವಿಕಾರಬಾದ್ ಬಳಿ ಕಾರು ಅಪಘಾತಕ್ಕೀಡಾಗಿದ್ದು ಭಾರ್ಗವಿ ಮತ್ತು ಅನುಷಾ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ  ಎಂದು ಪೊಲೀಸರು ತಿಳಿಸಿದ್ದಾರೆ.
ಅನಂತಗಿರಿ ಅರಣ್ಯ ಪ್ರದೇಶದಲ್ಲಿ ಶೂಟಿಂಗ್ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದಾಗ ಎದುರಿಗೆ ಬರುತ್ತಿದ್ದ ಲಾರಿಯಿಂದ ಮುಖಾಮುಖಿ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಚಕ್ರಿ ಮತ್ತು ವಿನಯ್ ರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಭಾರ್ಗವಿ ಅವರು ತೆಲುಗಿನ ಮುತ್ಯಾಲ ಮೊಗ್ಗು ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com