ಮತ್ತೆ ಜಗಳವಾಡಿಕೊಂಡ್ರ ದರ್ಶನ್-ವಿಜಯಲಕ್ಷ್ಮಿ ದಂಪತಿ: ಇಲ್ಲಿದೆ ಡಿ ಬಾಸ್ ಪತ್ನಿಯ ಸ್ಪಷ್ಟನೆ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರ ಕಳೆದ ವಾರ ಬಿಡುಗಡೆಯಾಗಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಇದರ ಮಧ್ಯೆ ದರ್ಶನ್ ಮತ್ತು ವಿಜಯಲಕ್ಷ್ಮೀ ದಂಪತಿ ಮತ್ತೆ ಗಲಾಟೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.
ಮತ್ತೆ ಜಗಳವಾಡಿಕೊಂಡ್ರ ದರ್ಶನ್-ವಿಜಯಲಕ್ಷ್ಮಿ ದಂಪತಿ: ಇಲ್ಲಿದೆ ಡಿ ಬಾಸ್ ಪತ್ನಿಯ ಸ್ಪಷ್ಟನೆ!
Updated on

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರ ಕಳೆದ ವಾರ ಬಿಡುಗಡೆಯಾಗಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಇದರ ಮಧ್ಯೆ ದರ್ಶನ್ ಮತ್ತು ವಿಜಯಲಕ್ಷ್ಮೀ ದಂಪತಿ ಮತ್ತೆ ಗಲಾಟೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. 

ನಟ ದರ್ಶನ್ ತಮ್ಮ ಪತ್ನಿ ವಿಜಯಲಕ್ಷ್ಮಿ ಮತ್ತು ಅವರ ತಾಯಿಗೆ ಹೊಡೆದಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಈ ಬಗ್ಗೆ ಹಲವು ಮಾತುಗಳು ಕೇಳಿಬಂದಿತ್ತು. ಆದರೆ ಈ ಎಲ್ಲ ವದಂತಿಗಳಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ತೆರೆ ಎಳೆದಿದ್ದಾರೆ.

ವಿಜಯಲಕ್ಷ್ಮಿ ಅವರು ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, ವದಂತಿಯನ್ನು ಅಲ್ಲಗಳೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಗಾಳಿ ಸುದ್ದಿಗೆ ಆಧಾರವಿಲ್ಲ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಹಬ್ಬಿರುವ ಗಾಳಿ ಸುದ್ದಿಗೆ ಬ್ರೇಕ್ ಬಿದ್ದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com