ವಿಜಯ್ ದೇವರಕೊಂಡ ಅಭಿನಯದ 'ಅರ್ಜುನ್ ರೆಡ್ಡಿ ನಟಿ ಶಾಲಿನಿ ಪಾಂಡೆ ವಿರುದ್ಧ ದೂರು ದಾಖಲಾಗಿದೆ.
ಬಾಲಿವುಡ್ ಸ್ಟಾರ್ ನಟನ ಚಿತ್ರಕ್ಕೆ ನಾಯಕಿಯಾದ 'ಅರ್ಜುನ್ ರೆಡ್ಡಿ' ನಟಿ ಶಾಲಿನಿ ವಿರುದ್ಧ ಈಗ ಕ್ರಿಮಿನಲ್ ಕೇಸ್ ದಾಖಲಾಗಿದೆ ಎಂಬ ವಿಚಾರ ಬಹಿರಂಗವಾಗಿದೆ.
ವಿಜಯ್ ಅಂಟೋನಿ ಮತ್ತು ಅರುಣ್ ವಿಜಯ್ ನಾಯಕರಾಗಿ ನಟಿಸುತ್ತಿರುವ ''ಅಗ್ನಿ ಸಿರಗುಗಲ್'' ಚಿತ್ರದಲ್ಲಿ ಶಾಲಿನಿ ನಾಯಕಿಯಾಗಿ ನಟಿಸುತ್ತಿದ್ದಾರೆ.
27 ದಿನಗಳ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ನಟಿ ನಂತರ ಶೂಟಿಂಗ್ ಗೆ ಬರ್ತಿಲ್ಲ ಎಂದು ಚಿತ್ರತಂಡ ಆಕ್ರೋಶ ಹೊರಹಾಕಿದೆ
ಶಾಲಿನಿ ಪಾಂಡೆ ಅವರು 27 ದಿನ ಶೂಟಿಂಗ್ ಮಾಡಿ, ನಂತರ ಚಿತ್ರೀಕರಣ ಬರುತ್ತಿಲ್ಲ. ಅವರನ್ನು ಸಂಪರ್ಕಿಸಿದರೂ ಕೈಗೆ ಸಿಗುತ್ತಿಲ್ಲ' ಎಂದು ಬೇಸರ ವ್ಯಕ್ತಪಡಿಸುತ್ತಿರುವ, ನಿರ್ದೇಶಕ ಹಾಗೂ ನಿರ್ಮಾಪಕ ನಟಿಯ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಿದ್ದಾರಂತೆ.
ಜೊತೆಗೆ ತಮಿಳು ಮತ್ತು ತೆಲುಗು ನಿರ್ಮಾಪಕರ ಸಂಘದಲ್ಲಿ ಈ ಬಗ್ಗೆ ದೂರು ನೀಡಲು ಮುಂದಾಗಿದ್ದಾರಂತೆ.
ಶಾಲಿನಿ ಪಾಂಡೆ ಕೈಕೊಟ್ಟ ಕಾರಣದಿಂದ ಆ ಜಾಗಕ್ಕೆ ಕಮಲ್ ಹಾಸನ್ ಪುತ್ರಿ ಅಕ್ಷರಾ ಹಾಸನ್ ಅವರನ್ನ ಕರೆತರಲಾಗಿದೆಯಂತೆ.
Advertisement