ಬೆಂಗಳೂರು: ಉಗ್ರರ ದಾಳಿಯಲ್ಲಿ ಭಾರತೀಯ ಯೋಧರು ಹುತಾತ್ಮರಾಗಿದ್ದಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಮ್ಮ ಕೈಯಲ್ಲಿ ಏನೂ ಮಾಡೋಕಾಗುತ್ತಿಲ್ಲ ಎಂದು ನೋವಾಗುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯದ ಹೆಮ್ಮೆಯ ಯೋಧ ಮಂಡ್ಯದ ಗುರುವನ್ನು ನಾವು ಕಳೆದುಕೊಂಡಿದ್ದೇವೆ. ಇಷ್ಟೆಲ್ಲ ನಮ್ಮ ಮುಂದೆ ನಡೆಯುತ್ತಿದ್ದರು. ನಮ್ಮ ಕೈಯಲ್ಲಿ ಏನು ಮಾಡೋಕೆ ಆಗುತ್ತಿಲ್ಲವಲ್ಲ ಎಂದು ನೋವಾಗುತ್ತಿದೆ ಎಂದರು.
ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ ಬಸ್ ಅನ್ನು ಗುರಿಯಾಗಿಸಿಕೊಂಡು ಐಇಡಿ ಸ್ಫೋಟಿಸಿದ್ದು, ಕನಿಷ್ಠ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ.
Deeply saddened by #Pulwama incident... My thoughts and prayers for the martyrs & their families...