ಪತ್ನಿಗೆ ವರದಕ್ಷಿಣೆ ಕಿರುಕುಳ: 'ಅಗ್ನಿಸಾಕ್ಷಿ' ಅಖಿಲ್ ವಿರುದ್ಧ ದೂರು ದಾಖಲು!

ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆಂದು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ 'ಅಗ್ನಿಸಾಕ್ಷಿ' ಅಖಿಲ್ ವಿರುದ್ಧ ದೂರುದಾಖಲಾಗಿದೆ.
ಪತ್ನಿಗೆ ವರದಕ್ಷಿಣೆ ಕಿರುಕುಳ: 'ಅಗ್ನಿಸಾಕ್ಷಿ' ಅಖಿಲ್ ವಿರುದ್ಧ ದೂರು ದಾಖಲು!
ಪತ್ನಿಗೆ ವರದಕ್ಷಿಣೆ ಕಿರುಕುಳ: 'ಅಗ್ನಿಸಾಕ್ಷಿ' ಅಖಿಲ್ ವಿರುದ್ಧ ದೂರು ದಾಖಲು!
Updated on
ಬೆಂಗಳೂರು: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆಂದು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ 'ಅಗ್ನಿಸಾಕ್ಷಿ'  ಅಖಿಲ್ ವಿರುದ್ಧ ದೂರುದಾಖಲಾಗಿದೆ. ಅಖಿಲ್ ಪಾತ್ರಧಾರಿಯಾಗಿರುವ ರಾಜೇಶ್ ಧ್ರುವ ವಿರುದ್ಧ ದೂರು ದಾಖಲಿಸಲಾಗಿದೆ.
2017ರಲ್ಲಿ ಶ್ರುತಿಯವರನ್ನು ವಿವಾಹವಾಗಿದ್ದ ರಾಜೇಶ್ ಅವರಿಗೆ ವರದಕ್ಷಿಣೆ ತರುವಂತೆ ಪೀಡಿಸಿದ್ದಾರೆ.ಅಲ್ಲದೆ ಅವರಿಗೆ ಮಾನಸಿಕ ಹಿಂಸೆ ಕೊಟ್ಟು ಮನೆಯಿಂದ ಹೊರ ಹಾಕಿದ್ದಾರೆ.
ಹಲವು ತಿಂಗಳ ಕಾಲ ಶ್ರುತಿ ಅವರೊಡನೆ ಲಿವಿಂಗ್ ಟುಗೆದರ್ ಸಂಬಂಧದಲ್ಲಿದ್ದ ರಾಜೇಶ್ 2017ರಲ್ಲಿ ಅವರನ್ನು ವಿವಾಹವಾಗಿದ್ದರು.ಆ ಬಳಿಕ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರ ಮನೆಯಲ್ಲಿ ಬಾಡಿಗೆಗಿದ್ದ ನಟ "ತನಗೆ ಮದುವೆಯೇ ಆಗಿಲ್ಲ" ಎಂದುಕೊಂಡು ತಿರುಗುತ್ತಿದ್ದರು ಎನ್ನಲಾಗಿದೆ.
ಇದೀಗ ರಾಜೇಶ್ ಪತ್ನಿ ಶ್ರುತಿ ಪತಿ ವಿರುದ್ಧ ಬಸವನಗುಡಿ ಮಹಿಳಾ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪೋಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com