ಖ್ಯಾತ ಹಾಸ್ಯನಟ ಬ್ರಹ್ಮಾನಂದಂಗೆ ಹೃದಯ ಶಸ್ತ್ರಚಿಕಿತ್ಸೆ

ತೆಲುಗು ಚಿತ್ರರಂಗದ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ಮುಂಬೈನ ಏಷ್ಯನ್ ಹಾರ್ಟ್ ಇನ್ ಸ್ಟಿಟ್ಯೂಟ್ ನಲ್ಲಿ ಹೃದಯ ಶಸ್ತ್ರಚಿಕಿತ್ಸೆ ಬಳಿಕ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮುಂಬೈ: ತೆಲುಗು ಚಿತ್ರರಂಗದ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ಮುಂಬೈನ ಏಷ್ಯನ್ ಹಾರ್ಟ್ ಇನ್ ಸ್ಟಿಟ್ಯೂಟ್ ನಲ್ಲಿ ಹೃದಯ ಶಸ್ತ್ರಚಿಕಿತ್ಸೆ ಬಳಿಕ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ ಕಳೆದ ಭಾನುವಾರ ಹೃದಯ ಸಂಬಂಧಿ ಸಮಸ್ಯೆಯಿಂದ ಬ್ರಹ್ಮಾನಂದಂ ಅವರು ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ವೈದ್ಯರ ಸಲಹೆ ಮೇರೆಗೆ ಅವರನ್ನು ಮುಂಬೈನ ಏಷ್ಯನ್ ಹಾರ್ಟ್ ಇನ್ ಸ್ಟಿಟ್ಯೂಟ್ ನಲ್ಲಿ ದಾಖಲಿಸಲಾಗಿತ್ತು. ಇದೀಗ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಖ್ಯಾತ ಹೃದ್ರೋಗ ತಜ್ಞ ರಮಾಕಾಂತ್ ಪಾಂಡಾ ನೇತೃತ್ವದ ವೈದ್ಯರ ತಂಡ ಅವರಿಗೆ ಶಸ್ತ್ರಚಿಕಿತ್ಸೆ ಮಾಡಿದೆ. ಸದ್ಯಕ್ಕೆ ಅವರ ಆರೋಗ್ಯ ಪರಿಸ್ಥಿತಿ ಸುಧಾರಿಸಿದೆ ಎಂದು ತಿಳಿದುಬಂದಿದೆ.
ಬ್ರಹ್ಮಾನಂದಂ ಕುಟುಂಬಿಕರೆಲ್ಲಾ ಮುಂಬೈನಲ್ಲೇ ಇದ್ದು ಬ್ರಹ್ಮಾನಂದಂ ಆರೈಕೆ ನೋಡಿಕೊಳ್ಳುತ್ತಿದ್ದಾರೆ. ಅವರ ಪುತ್ರ ರಾಜಾ ಗೌತಮ್, ಸಿದ್ಧಾರ್ಥ್ ತಂದೆಯ ಜತೆಗೇ ಇದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಹಾಸ್ಯ ನಟನ ಆರೋಗ್ಯ ಪರಿಸ್ಥಿತಿ ತಿಳಿದು ಅವರ ಅಭಿಮಾನಿಗಳು ಅಷ್ಟೇ ಅಲ್ಲದೆ ತೆಲುಗು ಚಿತ್ರರಂಗದ ಖ್ಯಾತನಾಮರೂ ಕೂಡ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. 
ಒಂದೇ ಭಾಷೆಯಲ್ಲಿ ಅತಿ ಹೆಚ್ಚು ಸಿನಿಮಾಗಳಲ್ಲಿ ನಟಿಸುವ ಕಲಾವಿದನಾಗಿ ಗಿನ್ನೆಸ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಬ್ರಹ್ಮಾನಂದಂ ಹೆಸರು ದಾಖಲಾಗಿದೆ. ತೆಲುಗಿನಲ್ಲಿ 1000ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬ್ರಹ್ಮಾನಂದಂ ಅಭಿನಯಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com