ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಫಿಲ್ಮ್ ಚೇಂಬರ್) ನೂತನ ಅಧ್ಯಕ್ಷರಾಗಿ ಡಿ.ಆರ್.ಜೈರಾಜ್ ಅವಿರೋಧ ಆಯ್ಕೆಯಾಗಿದ್ದಾರೆ.
ಚೇಂಬರ್ ಅಧ್ಯಕ್ಷ ಸ್ಥಾನಕ್ಕಾಗಿ ಸ್ಪರ್ಧಿಸಿದ್ದ ನ್ರ್ಮಾಪಕ ರಾಕ್ ಲೈನ್ ವೆಂಕಟೇಶ್, ಸುಂದರರಾಜ್, ನರಸಿಂಹಲು ಅವರುಗಳು ನಾಮಪತ್ರ ಹಿಂಪಡೆದ ಕಾರಣ ಜೈರಾಜ್ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಇನ್ನು ಉಪಾಧ್ಯಕ್ಷ ಸ್ಥಾನಕ್ಕೆ ಪ್ರದರ್ಶಕರ ವಲಯದಿಂದ ವೆಂಕಟರಮಣ, ವಿತರಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಎ. ಗಣೇಶ, ಪ್ರದರ್ಶಕರ ವಲಯದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನರಸಿಂಹಲು ಎಂ. ಸಹ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಳಿದ ಸ್ಥಾನಗಳಿಗೆ ಇದೇ 29ರಂದು ಚುನಾವಣೆ ನಡೆಯಲಿದೆ. ಕಳೆದ ಬಾರಿಯಂತೆಯೇ ಈ ಬಾರಿ ಸಹ ಇವಿಎಂಗಳ ಮೂಲಕ ಮತ ಚಲಾವಣೆಯಾಗಲಿದೆ.