ಹಾವೇರಿ, ದಾವಣಗೆರೆ, ಚಿತ್ರದುರ್ಗ, ರಾಣಿಬೆನ್ನೂರು, ಹಿರಿಯೂರು, ಶಿರಾ, ತುಮಕೂರು ಸೇರಿದಂತೆ ಕರ್ನಾಟಕದ ನಾನಾ ಕಡೆ "ನಟಸಾರ್ವಭೌಮ" ಚಿತ್ರತಂಡದ ಸದಸ್ಯರು ಪ್ರವಾಸ ಕೈಗೊಳ್ಳಲಿದ್ದಾರೆ. ಸದ್ಯ ಧಾರವಾಡದಲ್ಲಿ "ಯುವರತ್ನ" ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರುವ ಪುನೀತ್ ಭಾನುವಾರ ತಮ್ಮ ಅಭಿಮಾನಿಗಳನ್ನು ಭೇಟಿಯಾಗಿ "ನಟಸಾರ್ವಭೌಮ" ಚಿತ್ರದ ಯಶಸ್ಸಿನ ಸಂತಸವನ್ನು ಹಂಚಿಕೊಳ್ಳುತ್ತಾರೆ.