ಸಮಾಜ ಘಾತುಕ ವ್ಯಕ್ತಿಗಳ ಬಂಧನವಾದಾಗಲೆಲ್ಲ ನನ್ನ ಹೆಸರು ತರುವುದು ತಪ್ಪು. ನನ್ನ ಕೊಲೆಗೆ ಸುಪಾರಿ ಎಂಬ ಸುದ್ದಿಗಳಿಂದ ನನಗೆ ಬೇಸರವಾಗಿದೆ. ನನ್ನ ಮನೆಯವರು, ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ಕಿರಿಕಿರಿಯಾಗುತ್ತಿದೆ. ದಯವಿಟ್ಟು ಇಂತಹ ಸುದ್ದಿ ಪ್ರಸಾರ ಮಾಡುವುದನ್ನು ನಿಲ್ಲಿಸಿ. ನನ್ನ ಹತ್ಯೆಗೆ ಸಂಚು ಸುದ್ದಿ ಕುರಿತಂತೆ ನಿಮಗೆ ಯಾರು ಮಾಹಿತಿ ಕೊಡುತ್ತಿದ್ದಾರೆ ಎಂದು ದಯವಿಟ್ಟು ನಮಗೆ ತಿಳಿಸಿ. ಸತ್ಯಾಸತ್ಯತೆಯನ್ನು ಪೊಲೀಸರು ಪತ್ತೆ ಮಾಡುತ್ತಾರೆ ಎಂದರು.