'ನಾನು ಕಳೆದ ಕೆಲ ದಿನಗಳಿಂದ ಆನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಹಣಕಾಸಿನ ನೆರವು ನೀಡಿ ಅಂತ ಸ್ಯಾಂಡಲ್ ವುಡ್ ನ ಸ್ಟಾರ್ ನಟರಿಗೆ ಮನವಿ ಮಾಡಿಕೊಂಡಿದ್ದೆ. ಇದನ್ನು ನೋಡಿದ ನಟ ರವಿಪ್ರಕಾಶ್ ಫೆಬ್ರವರಿ 27ರಂದು ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ, ಒಂದು ಲಕ್ಷ ನಗದು ಸೇರಿದಂತೆ ಅವಶ್ಯವಿರುವ ಬಟ್ಟೆ, ಊಟ, ತಿಂಡಿ ಸೇರಿದಂತೆ ಅವಶ್ಯಕ ವಸ್ತುಗಳನ್ನು ನೀಡಿದ್ದರು. ಇದಾದ ನಂತರ ಪ್ರತಿದಿನ ಆಸ್ಪತ್ರೆಯ ಐಸಿಯೂಗೆ ಬರೋದು, ಪದೇ ಪದೇ ಫೋನ್, ಮಸೇಜ್ ಮಾಡೋದು ಸೇರಿದಂತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ನಟಿ ವಿಜಯಲಕ್ಷ್ಮೀ ಆರೋಪಿಸಿದ್ದಾರೆ.