ಅದಕ್ಕಾಗಿ ನಗರದ ಹೊರವಲಯದಲ್ಲಿರುವ ಲಗುಮೇನಹಳ್ಳಿಯಲ್ಲಿರುವ ಶಾಲೆಯನ್ನು ದತ್ತು ಸ್ವೀಕರಿಸಿದ್ದು, ಈ ಶಾಲೆ ಅವರ ಮನೆಗೆ ಹತ್ತಿರದಲ್ಲೇ ಇರುವುದರಿಂದ ಈ ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸಲು ಯೋಜನೆ ಹಾಕಿಕೊಂಡಿದ್ದಾರೆ. ಈ ಶಾಲೆಯಲ್ಲಿ ಸುಮಾರು 66 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಇಲ್ಲಿ ಇಬ್ಬರು ಶಿಕ್ಷಕರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಪೈಕಿ ಓರ್ವ ಶಿಕ್ಷಕ ಇತ್ತೀಚೆಗೆ ವೈಯುಕ್ತಿಕ ಕಾರಣ ನೀಡಿ ರಾಜಿನಾಮೆ ನೀಡಿದ್ದರು.