ಚಿಕ್ಕಮಗಳೂರು: ನಟ ಸುದೀಪ್ ವಿರುದ್ಧ ಅರೆಸ್ಟ್ ವಾರೆಂಟ್

ದೀಪಕ್ ಮಯೂರ್ ಎಂಬುವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜೆಎಂಎಫ್ ಸಿ ನ್ಯಾಯಾಲಯದಿಂದ ಸುದೀಪ್ ಅವರಿಗೆ ಅರೆಸ್ಟ್ ವಾರೆಂಟ್...
ಸುದೀಪ್
ಸುದೀಪ್
Updated on
ಬೆಂಗಳೂರು: ದೀಪಕ್ ಮಯೂರ್ ಎಂಬುವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜೆಎಂಎಫ್ ಸಿ ನ್ಯಾಯಾಲಯದಿಂದ ಸುದೀಪ್ ಅವರಿಗೆ ಅರೆಸ್ಟ್ ವಾರೆಂಟ್ ನೀಡಿದೆ.
ವಾರಸ್ದಾರ ಎಂಬ ಧಾರಾವಾಹಿ ಚಿತ್ರೀಕರಣದ ಬಾಡಿಗೆ ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸುದೀಪ್ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿದೆ. ವಾರಸ್ದಾರ ಧಾರಾವಾಹಿಗೆ ಮನೆ ಪಡೆದು ಬಾಡಿಗೆ ನೀಡದ ಪ್ರಕರಣ ಸಂಬಂಧ ಚಿಕ್ಕಮಗಳೂರು ಜೆಎಂಎಫ್ ಸಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದೆ.  ದೀಪಕ್ ಮಯೂರ್ ಎಂಬುವವರು ನೀಡಿದ ದೂರಿನ ಸಂಬಂಧ ಕೋರ್ಟ್ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಸಮನ್ಸ್ ನೀಡಲಾಗಿದೆ. 
ನಟ ಸುದೀಪ್ ನಿರ್ಮಾಣದ ವಾರಸ್ದಾರ ಧಾರಾವಾಹಿ ಚಿತ್ರೀಕರಣಕ್ಕೆ ದೀಪಕ್ ಮಯೂರ್ ಎನ್ನುವವರು ಮನೆ, ತೋಟ ಬಾಡಿಗೆ ನೀಡಿದ್ದರು. ಧಾರಾವಾಹಿ ಶೂಟಿಂಗ್ ಸಂದರ್ಭದಲ್ಲಿ ಕಾಫಿ ತೋಟಕ್ಕೆ ಸಾಕಷ್ಟು ಹಾನಿಯಾಗಿದ್ದು, ಹಾನಿಯಾದ ಹಿನ್ನೆಲೆಯಲ್ಲಿ ಒಟ್ಟು 1.50 ಕೋಟಿ ರೂ. ನಷ್ಟವಾಗಿದೆ. ಈ ಹಣವನ್ನು ನೀಡಬೇಕೆಂದು ಧಾರಾವಾಹಿ ನಿರ್ಮಾಣ ತಂಡಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಈ ಬೇಡಿಕೆಯನ್ನು ಸುದೀಪ್ ಕ್ರಿಯೇಶನ್ಸ್ ತಿರಸ್ಕರಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com