ಕಳ್ಳರ ಸಂತೆ ಚಿತ್ರದ ಮೂಲಕ ನಟಿಯಾಗಿ ಗುರುತಿಸಿಕೊಂಡೆ. ನಂತರ ತೆಲುಗಿನಲ್ಲಿ ಪಿಳ್ಳ ಜಮಿನ್ದಾರ, ತಮಿಳಿನಲ್ಲಿ ಮುರನ್, ಮಲಯಾಳಂನಲ್ಲಿ ತಿರುವಂಬಡಿ ತಂಬನ್ ಗಳಿಂದ ದಕ್ಷಿಣ ಭಾರತ ಚಿತ್ರರಂಗದಲ್ಲಿ ಗುರುತಿಸಿಕೊಂಡೆ. ನಂತರ ಉಗ್ರಂ ಮೂಲಕ ಸ್ಯಾಂಡಲ್ ವುಡ್ ನಲ್ಲಿ ನೆಲೆ ನಿಂತೆ. ಅದು ಮತ್ತಷ್ಟು ನನ್ನ ವೃತ್ತಿಗೆ ಉತ್ತೇಜನ ಕೊಟ್ಟ ಚಿತ್ರ. ನಂತರ ಬಂದ ನೀರ್ ದೋಸೆ, ಭಜರಂಗಿ, ತೆಲುಗಿನಲ್ಲಿ ಜೈ ಸಿಂಹ ಮತ್ತು ಈ ವರ್ಷದ ಬೆಲ್ ಬಾಟಮ್ ಚಿತ್ರಗಳು ಯಶಸ್ವಿಯಾದವು. ಇಲ್ಲಿಯವರೆಗೆ ನನ್ನ ವೃತ್ತಿ ಜೀವನ ಮೇಲ್ಮುಖವಾಗಿಯೇ ಸಾಗಿವೆ ಎಂದರು ಹರಿಪ್ರಿಯಾ.