ಬೆಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿಯವರಿಗೆ ಪಿತೃವಿಯೋಗವಾಗಿದೆ. ರಾಧಿಕಾ ಕುಮಾರಸ್ವಾಮಿ ಅವರ ತಂದೆ ದೇವರಾಜ್ ಭಾನುವಾರ ಬೆಳಿಗ್ಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕೆಲ ದಿನಗಳಿಂಡ ಅನಾರೋಗ್ಯಪೀಡಿತರಾಗಿದ್ದ ದೇವರಾಜ್ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
ಕಳೆದ ನಾಲ್ಕು ದಿನಗಳಿಂದ ಮಂಗಳೂರಿನ ಸೋಲೆತ್ತೂರು ಗ್ರಾಮದಲ್ಲಿ ನಡೆಯುತ್ತಿದ್ದ ನೇಮ ಕೋಲಸೇವೆಯಲ್ಲಿ ನಟಿ ರಾಧಿಕಾ ಇಡೀ ಕುಟುಂಬ ಭಾಗವಹಿಸಿತ್ತು.
ಅಲ್ಲಿಂದ ಹಿಂತಿರುಗಿದ್ದ ಬಳಿಕ ದೇವರಾಜ್ ಕಫದ ತೊಂದರೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.