'ದಕ್ಷಿಣೆ ಪಡೆದು ಕಳಿಸುವ ಚಾಂಡಾಳ ವೃತ್ತಿ': ಜಗ್ಗೇಶ್ ಆಕ್ರೋಶ ಯಾರ ವಿರುದ್ಧ?

ಕನ್ನಡ ಚಿತ್ರರಂಗದ ವಿರುದ್ಧ ಮತ್ತೆ ನಟ ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟಕ್ಕೂ ನಟ ಜಗ್ಗೇಶ್ ಆಕ್ರೋಶಕ್ಕೆ ಕಾರಣ ಏನು ಗೊತ್ತಾ?
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಉತ್ತಮ ಪ್ರೇಕ್ಷಕರ ಹೊರತಾಗಿಯೂ ಕಾಳಿದಾಸ ಕನ್ನಡಮೇಷ್ಟ್ರು ಚಿತ್ರಮಂದಿರಗಳಿಂದ ಚಿತ್ರ ಎತ್ತಂಗಡಿ

ಬೆಂಗಳೂರು: ಕನ್ನಡ ಚಿತ್ರರಂಗದ ವಿರುದ್ಧ ಮತ್ತೆ ನಟ ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟಕ್ಕೂ ನಟ ಜಗ್ಗೇಶ್ ಆಕ್ರೋಶಕ್ಕೆ ಕಾರಣ ಏನು ಗೊತ್ತಾ?

ಹೌದು.. ಇತ್ತೀಚೆಗೆ ನಟ ಜಗ್ಗೇಶ್ ಅಭಿನಯದ ಕಾಳಿದಾಸ ಕನ್ನಡ ಮೇಷ್ಟ್ರು ಚಿತ್ರ ಬಿಡುಗಡೆಯಾಗಿತ್ತು. ಬಿಡುಗಡೆಯಾಗಿದ್ದು ಮಾತ್ರವಲ್ಲದೇ ಪ್ರೇಕ್ಷಕರಿಂದಲೂ ಉತ್ತಮ ಪ್ರತಿಕ್ರಿಯೆ ಪಡೆದಿತ್ತು. ಆದರೆ ಇದೀಗ ಇದೇ ಚಿತ್ರವನ್ನು ಚಿತ್ರಮಂದಿರಗಳಿಂದ ಎತ್ತಂಗಡಿ ಮಾಡಲಾಗುತ್ತಿದೆ ಎಂದು ನಟ ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರಕ್ಕೆ ಉತ್ತಮ ಕಲೆಕ್ಷನ್ ಇದ್ದರೂ ಥಿಯೇಟರ್ ಮಾಲೀಕರು ಬಲವಂತವಾಗಿ ಚಿತ್ರವನ್ನು ತೆಗೆಯುತ್ತಿದ್ದಾರೆ. ಉತ್ತಮ ಚಿತ್ರಕ್ಕೆ ಆಗುತ್ತಿರುವ ಮೋಸವನ್ನು ನೋಡಿಯೂ ಕೂಡ ಚಿತ್ರರಂಗದ ಹಿರಿಯರು ಮೌನವಾಗಿದ್ದಾರೆ ಎಂದು ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ವಿದ್ಯುತ್ ಚಿತಾಗಾರವಾಯಿತು ಕನ್ನಡ ಚಿತ್ರರಂಗ! ಕರುಣೆ ಇಲ್ಲದೆ ಬಂದಹೆಣ ಸುಟ್ಟು ದಕ್ಷಿಣೆ ಪಡೆದು ಕಳಿಸುವ ಚಾಂಡಾಳವೃತ್ತಿಯಾಗಿದೆ ಚಿತ್ರರಂಗ!ಯಶಸ್ವಿಯಾದ ಕಾಳಿದಾಸಕನ್ನಡಮೇಷ್ಟ್ರು ಕರುಣೆಯಿಲ್ಲದೆ ಎತ್ತಂಗಡಿ ಅನೇಕ ಚಿತ್ರಮಂದಿರದಲ್ಲಿ! ಧನ್ಯವಾದ ಕಿವಿಡು ಕುರುಡು ಚಿತ್ರರಂಗದ ಹಿರಿಯರಿಗೆ! ಉದ್ದಾರ ಕನ್ನಡಚಿತ್ರರಂಗ.. ಶುಭಮಸ್ತು ಕನ್ನಡಕ್ಕೆ! ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com