ಡಾ. ರಾಜ್, ಅಂಬರೀಶ್ ಸಮಾಧಿಗೆ ನಮಿಸಿದ ತೆಲುಗು ನಟ ಜಗಪತಿ ಬಾಬು

ದಕ್ಷಿಣ ಭಾರತದಲ್ಲಿ ಬಹು ಬೇಡಿಕೆಯ ಖಳನಟನಾಗಿ ಮಿಂಚುತ್ತಿರುವ ತೆಲುಗಿನ ನಟ ಜಗಪತಿ ಬಾಬು ಅವರು ನಟಸಾರ್ವಭೌಮ ಡಾ. ರಾಜಕುಮಾರ್ ಮತ್ತು ರೆಬೆಲ್ ಸ್ಟಾರ್ ಅಂಬರೀಶ್ ಸಮಾಧಿಗೆ ಪುಷ್ಪ...
ಜಗಪತಿ ಬಾಬು
ಜಗಪತಿ ಬಾಬು
ದಕ್ಷಿಣ ಭಾರತದಲ್ಲಿ ಬಹು ಬೇಡಿಕೆಯ ಖಳನಟನಾಗಿ ಮಿಂಚುತ್ತಿರುವ ತೆಲುಗಿನ ನಟ ಜಗಪತಿ ಬಾಬು ಅವರು ನಟಸಾರ್ವಭೌಮ ಡಾ. ರಾಜಕುಮಾರ್ ಮತ್ತು ರೆಬೆಲ್ ಸ್ಟಾರ್ ಅಂಬರೀಶ್ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ. 
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ನಿರ್ಮಾಪಕ ಉಮಾಪತಿ ಅವರೊಂದಿಗೆ ಜಗಪತಿ ಬಾಬು ಅವರು ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ಆಗಮಿಸಿ ಡಾ. ರಾಜ್, ಪಾರ್ವತಮ್ಮ ಮತ್ತು ಅಂಬರೀಶ್ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು. 
ರಾಬರ್ಟ್ ಚಿತ್ರದಲ್ಲಿ ಜಗಪತಿ ಬಾಬು ಅವರು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದು ಶೂಟಿಂಗ್ ಗಾಗಿ ಬೆಂಗಳೂರಿಗೆ ಆಗಮಿಸಿದ ಅವರು ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com