ಚಿತ್ರದ ನಿರ್ದೇಶಕ ಮಯೂರ ರಾಘವೇಂದ್ರ, “ಈ ಹಿಂದೆ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಕನ್ನಡೇತರರು ಕನ್ನಡ ಭಾಷೆಯ ಬಗ್ಗೆ ತೋರುತ್ತಿದ್ದ ಅನಾದರಣೆ, ಅಗೌರವದಿಂದ ಮನನೊಂದು, ಚಿತ್ರದ ಮೂಲಕ ಉತ್ತರ ನೀಡಬೇಕೆಂದು ಬಯಸಿದ್ದೆ ಅದಕ್ಕೆ ಅನೇಕ ಗೆಳೆಯರು ಸಹಕರಿಸಿದರು ನಿರ್ಮಾಪಕ ಕುಮಾರ ಕಂಠೀರವ ಬಂಡವಾಳ ಹೂಡಿದ್ದರಿಂದ ಚಿತ್ರ ತಯಾರಾಗಿದ್ದು, ಶೀಘ್ರದಲ್ಲೇ ಬಿಡುಗಡೆಯಾಗಲಿದೆ” ಎಂದು ತಿಳಿಸಿದರು ನಾಯಕಿ ಹರಿಪ್ರಿಯಾ, “ಚಿತ್ರದಲ್ಲಿ ತನಿಖಾಧಿಕಾರಿಯ ಪಾತ್ರ ನಿರ್ವಹಿಸುತ್ತಿದ್ದೇನೆ ‘ಕನ್ನಡ್ ಗೊತ್ತಿಲ್ಲ’ ಕಣಕಣದಲ್ಲೂ ಕನ್ನಡ ಎಂಬ ಅಡಿಬರಹ ಹೊಂದಿದೆ ಹೀಗಾಗಿ ಕನ್ನಡ ಭಾಷೆಗೂ ಸಸ್ಪೆನ್ಸ್, ಥ್ರಿಲ್ಲರ್ ಚಿತ್ರಕಥೆಗೂ ಸಂಬಂಧವೇನು ಎಂಬುದನ್ನು ಚಿತ್ರ ನೋಡಿಯೇ ತಿಳಿದುಕೊಳ್ಳಬೇಕು” ಎಂದು ಹೇಳಿದರು