ನಾನು ಅಸಹಾಯಕನಾಗಿದ್ದೇನೆ, ನೋವಾಗಿದ್ದಲ್ಲಿ ನನ್ನನ್ನು ಕ್ಷಮಿಸಿ: ಕಿಚ್ಚ ಸುದೀಪ್

ನನ್ನಿಂದ ನೋವಾಗಿದ್ದಲ್ಲಿ ನನ್ನನ್ನು ಕ್ಷಮಿಸಿ ಎಂದು ಕಿಚ್ಚ ಸುದೀಪ್ ತಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ. 
ನಾನು ಅಸಹಾಯಕನಾಗಿದ್ದೇನೆ, ನೋವಾಗಿದ್ದಲ್ಲಿ ನನ್ನನ್ನು ಕ್ಷಮಿಸಿ: ಕಿಚ್ಚ ಸುದೀಪ್

ಬೆಂಗಳೂರು: ನನ್ನಿಂದ ನೋವಾಗಿದ್ದಲ್ಲಿ ನನ್ನನ್ನು ಕ್ಷಮಿಸಿ ಎಂದು ಕಿಚ್ಚ ಸುದೀಪ್ ತಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ. 

ನಟ ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ವರಮಹಾಲಕ್ಷ್ಮಿ ಹಬ್ಬದಂದು ನಡೆಬೇಕಿತ್ತು. ಆದರೆ ಕಾರ್ಯಕ್ರಮವನ್ನು ಮುಂದೂಡಿದ್ದರಿಂದ ಕಿಚ್ಚ ಸುದೀಪ್ ತಮ್ಮ ಸ್ನೇಹಿತರ ಬಳಿ ಕ್ಷಮೆ ಕೇಳಿದ್ದಾರೆ. 

ಆಡಿಯೋ ಕಾರ್ಯಕ್ರಮವನ್ನು ಮುಂದೂಡಲು ನನಗೂ ಇಷ್ಟವಿರಲಿಲ್ಲ. ಆದರೆ ಉತ್ತರ ಕರ್ನಾಟಕದಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು ಸಂತ್ರಸ್ತರಿಗೆ ಸಹಾಯ ಮಾಡಬೇಕಿದೆ. ಹೀಗಾಗಿ ಅಲ್ಲಿ ನಮ್ಮ ಎನರ್ಜಿ ಹಾಕಬೇಕಿದೆ ಎಂದು ಎಲ್ಲ ಹುಡುಗರನ್ನು ಕೇಳಿಕೊಂಡಿದ್ದೇನೆ ಎಂದು ಟ್ವೀಟರ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. 

ಆಡಿಯೋ ಕಾರ್ಯಕ್ರಮವನ್ನು ಕ್ಯಾನ್ಸಲ್ ಮಾಡುತ್ತಿಲ್ಲ. ಮುಂದಕ್ಕೆ ಹಾಕುತ್ತಿದ್ದೇನೆ. ಇದಕ್ಕೆ ನಿಮ್ಮೆಲ್ಲರ ಬೆಂಬಲ ಬೇಕು ಎಂದು ಚಿತ್ರತಂಡದ ಎಲ್ಲ ಕಲಾವಿದರ ಬಳಿ ಮನವಿ ಮಾಡಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com