ಪ್ರವಾಹ ಸಂತ್ರಸ್ತರಿಗೆ ಮಿಡಿದ ಪುನೀತ್: ಸಿಎಂ ಪರಿಹಾರ ನಿಧಿಗೆ 5 ಲಕ್ಷ ರೂಪಾಯಿ

ಪ್ರವಾಹ ಸಂತ್ರಸ್ತರ ನೆರವಿಗಾಗಿ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್​ ರಾಜಕುಮಾರ್​ ಮನ ಮಿಡಿದಿದ್ದು, ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಲಕ್ಷ ರೂಪಾಯಿ ಚೆಕ್ ಹಸ್ತಾಂತರಿಸಿದ್ದಾರೆ.
ಪುನೀತ್ ರಾಜ್ ಕುಮಾರ್
ಪುನೀತ್ ರಾಜ್ ಕುಮಾರ್
Updated on

ಬೆಂಗಳೂರು: ಪ್ರವಾಹ ಸಂತ್ರಸ್ತರ ನೆರವಿಗಾಗಿ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್​ ರಾಜಕುಮಾರ್​ ಮನ ಮಿಡಿದಿದ್ದು, ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಲಕ್ಷ ರೂಪಾಯಿ ಚೆಕ್ ಹಸ್ತಾಂತರಿಸಿದ್ದಾರೆ.

ಡಾಲರ್ಸ್​ ಕಾಲೋನಿಯಲ್ಲಿರುವ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರ ಧವಳಗಿರಿ ನಿವಾಸಕ್ಕೆ ಗುರುವಾರ ಭೇಟಿ ನೀಡಿ ಚೆಕ್​ ನೀಡಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ​ ಅವರು, ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವವರಿಗೆ ನೀಡಬೇಕಾದ ನೆರವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಿದ್ದೇನೆ. ನಾನು ಒಂದೆರಡು ಬಾರಿ ಸಾಮಾಜಿಕ ಜಾಲತಾಣ ನೇರ ಪ್ರಸಾರದಲ್ಲಿ ಸಂತ್ರಸ್ತರ ಕುರಿತು ಮಾತಾಡಿದ ನಂತರ ಸಾಕಷ್ಟು ಜನ ಪರಿಹಾರ ನೀಡಲು ಮುಂದಾಗಿದ್ದು ಸಂತಸ ತಂದಿದೆ ಎಂದರು.

ಈಗ ಆಗಿರುವ ನಷ್ಟಗಳ ಪರಿಹಾರಕ್ಕೆ ಧನ ಸಹಾಯ ಮಾಡಿದ್ದೇನೆ. ಇದರ ಜೊತೆಗೆ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡಿರುವೆ. ಈ ಮೂಲಕ ನಿರಾಶ್ರಿತರಿಗೆ ಮುಂದಿನ ದಿನಗಳಲ್ಲಿ ನೆರವಾಗುವುದಾಗಿ ಪುನೀತ್ ರಾಜ್​ಕುಮಾರ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com