'ಬಡವ ರಾಸ್ಕಲ್' ಸುದ್ದಿಗೋಷ್ಠಿ: ಪತ್ರಕರ್ತ ರವಿ ಬೆಳೆಗೆರೆ ವಿರುದ್ಧ ಕಿಡಿಕಾರಿದ ಕರಿಚಿರತೆ ವಿಜಯ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ವೈಯಕ್ತಿಕ ಜೀವನದ ವಿರುದ್ದ ಮಾತನಾಡಿದ್ದ ಹಿರಿಯ ಪತ್ರಕರ್ತ ರವಿಬೆಳೆಗೆರೆ ಅವರನ್ನು ನಟ ದುನಿಯಾ ವಿಜಯ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ರವಿಬೆಳೆಗೆರೆ-ದರ್ಶನ್-ವಿಜಯ್
ರವಿಬೆಳೆಗೆರೆ-ದರ್ಶನ್-ವಿಜಯ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ವೈಯಕ್ತಿಕ ಜೀವನದ ವಿರುದ್ದ ಮಾತನಾಡಿದ್ದ ಹಿರಿಯ ಪತ್ರಕರ್ತ ರವಿಬೆಳೆಗೆರೆ ಅವರನ್ನು ನಟ ದುನಿಯಾ ವಿಜಯ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. 

ಬಡವ ರಾಸ್ಕಲ್ ಚಿತ್ರದ ಸುದ್ದಿಗೋಷ್ಠಿಯಲ್ಲಿ ಚಿತ್ರಕ್ಕೆ ಶುಭಕೋರಿದ ದುನಿಯಾ ವಿಜಯ್ ರವಿ ಬೆಳೆಗೆರೆ ವಿಚಾರವಾಗಿ ಮಾತನಾಡಿದ್ದು ಮೊದಲ ಆತ ತಮ್ಮ ಕುಟುಂಬ ನೆಟ್ಟಗಿದೆಯಾ ಎಂಬುದನ್ನು ನೋಡಿಕೊಳ್ಳಲಿ ಎಂದರು.

ರವಿ ಬೆಳೆಗೆರೆಗೆ ಇಬ್ಬರು ಹೆಂಡತಿಯರು. ಮೊದಲು ತಮ್ಮ ಕುಟುಂಬ ನೆಟ್ಟಗಿದೆಯಾ ಎಂದು ನೋಡಿಕೊಳ್ಳಲಿ. ಆಮೇಲೆ ದರ್ಶನ್ ಆಗಲಿ, ನಮ್ಮ ಬಗ್ಗೆಯಾಗಲಿ ಮಾತನಾಡಲಿ. ಆರು ತಿಂಗಳು ಆಸ್ಪತ್ರೆಲಿ ಬಿದ್ದಿರುತ್ತಾನೆ. ಇನ್ನೂ ಬದುಕಿದ್ದಾನಾ ಅವನು? ಎಂದು ಏಕವಚನದಲ್ಲೇ ಕಿಡಿಕಾರಿದ್ದಾರೆ. 

ಯೂಟ್ಯೂಬ್ ನಲ್ಲಿ ವಿಡಿಯೋ ಅಪ್ ಲೋಡ್ ಮಾಡಿದ್ದ ರವಿಬೆಳೆಗೆರೆ ದರ್ಶನ್ ಮತ್ತು ವಿಜಯ್ ವಿರುದ್ಧ ಮಾತನಾಡಿದ್ದರು. ದುನಿಯಾ ವಿಜಯ್ ಬ್ಲ್ಯಾಕ್ ಕೋಬ್ರಾ ಅಲ್ಲ ಕರಿ ಗೊಬ್ಬರ. ಎಷ್ಟು ಜನರನ್ನು ಮದುವೆಯಾಗುತ್ತೀಯಾ? ಮದುವೆ ಮಾಡಿಕೊಂಡು ಹೆಂಡತಿಯನ್ನು ಬಿಡುತ್ತಾನೆ. ಮತ್ತೊಬ್ಬಳನ್ನು ಕಟ್ಟಿಕೊಳ್ಳುತ್ತಾನೆ. ಇವನು ಜೈಲು ಗಿರಾಕಿನೇ ಎಂದು ಹೇಳಿದ್ದರು. ಈ ವಿಡಿಯೋ ವೈರಲ್ ಆಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com