ಗೀತಾ ಚಿತ್ರದಲ್ಲಿ 'ಕನ್ನಡವೇ ಸತ್ಯ ಕನ್ನಡವೇ ನಿತ್ಯ' ಹಾಡಿಗೆ ಧ್ವನಿಯಾದ ಪುನೀತ್!

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಸಿನಿಮಾ 1980ರಲ್ಲಿ ನಡೆಯೋ ಕಥೆಯಾಗಿದೆ. ಆಗ ಗೋಕಾಕ್ ಚಳುವಳಿ ನಡೆದಿದ್ದು ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು ಹೋರಾಟಕ್ಕೆ ನಟಸಾರ್ವಭೌಮ ಡಾ. ರಾಜಕುಮಾರ್ ನೇತೃತ್ವ ವಹಿಸಿದ್ದರು.
ಗಣೇಶ್-ಪುನೀತ್ ರಾಜಕುಮಾರ್
ಗಣೇಶ್-ಪುನೀತ್ ರಾಜಕುಮಾರ್

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಸಿನಿಮಾ 1980ರಲ್ಲಿ ನಡೆಯೋ ಕಥೆಯಾಗಿದೆ. ಆಗ ಗೋಕಾಕ್ ಚಳುವಳಿ ನಡೆದಿದ್ದು ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು ಹೋರಾಟಕ್ಕೆ ನಟಸಾರ್ವಭೌಮ ಡಾ. ರಾಜಕುಮಾರ್ ನೇತೃತ್ವ ವಹಿಸಿದ್ದರು.

ಇದೀಗ ಈ ಚಿತ್ರಕ್ಕೆ ಮತ್ತೊಬ್ಬ ಸ್ಟಾರ್ ನಟ ಧ್ವನಿಗೂಡುತ್ತಿದೆ. ಹೌದು ಗೀತಾ ಚಿತ್ರಕ್ಕಾಗಿ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂಬ ಹಾಡನ್ನು ಪುನೀತ್ ರಾಜಕುಮಾರ್ ಅವರು ಆಡಿದ್ದಾರೆ. ಈ ಹಾಡಿಗಾಗಿ ಹೊಸ ಟಚ್ ನೀಡಲಾಗಿದೆ. 

ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಹಾಡನ್ನು ನಿರ್ದೇಶಕ ಸಂತೋಷ್ ಆನಂದ್ ರಾಮ್ ಬರೆದಿದ್ದಾರೆ. ಚಿತ್ರಕ್ಕೆ ಅನೂಪ್ ರೂಬೆನ್ಸ್ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದಲ್ಲಿ ದಿವಂಗತ ನಟ ಶಂಕರ್ ನಾಗ್ ಶೇಡ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 

ನಿರ್ದೇಶಕ ವಿಜಯ್ ನಾಗೇಂದ್ರ ಗೀತಾ ಚಿತ್ರವನ್ನು ನಿರ್ದೇಶಿಸಿದ್ದಾರೆ. ಗೋಲ್ಡನ್ ಫಿಲ್ಮಂ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಣವಾಗುತ್ತಿದ್ದು ಸೈಯದ್ ಸಲಾಂ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸೆಪ್ಟೆಂಬರ್ 27ಕ್ಕೆ ಚಿತ್ರ ಬಿಡುಗಡೆಗೆ ಚಿತ್ರತಂಡ ಯೋಜಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com