ನಾನೂ ಒಂದು ಹೆಣ್ಣು ಮಗುವಿನ ತಂದೆ - ನಟ ಉಪೇಂದ್ರ  ಟ್ವೀಟ್

ಹೈದರಾಬಾದ್ ನಲ್ಲಿ ಪಶುವೈದ್ಯೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳ ಎನ್ ಕೌಂಟರ್ ಗೆ ಸಂಬಂಧಿಸಿದಂತೆ ನಟ ಉಪೇಂದ್ರ ಮಾಡಿದ್ದ ಟ್ವೀಟ್ ಗೆ ಹಲವರು ಆಕ್ರೋಶ ವ್ಯಕ್ತ ಪಡಿಸಿದ್ದರು.
ಉಪೇಂದ್ರ
ಉಪೇಂದ್ರ

ಬೆಂಗಳೂರು:  ಹೈದರಾಬಾದ್ ನಲ್ಲಿ ಪಶುವೈದ್ಯೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳ ಎನ್ ಕೌಂಟರ್ ಗೆ ಸಂಬಂಧಿಸಿದಂತೆ ನಟ ಉಪೇಂದ್ರ ಮಾಡಿದ್ದ ಟ್ವೀಟ್ ಗೆ ಹಲವರು ಆಕ್ರೋಶ ವ್ಯಕ್ತ ಪಡಿಸಿದ್ದರು.

ತಮ್ಮ ಟ್ವೀಟ್ ಗೆ ನಿಂದಿಸಿರುವವರಿಗೆ ಉಪೇಂದ್ರ ಮತ್ತೆ ಟ್ಟಿಟ್ಟರ್ ನಲ್ಲೇ ಉತ್ತರ ನೀಡಿದ್ದಾರೆ.  ಎನ್ ಕೌಂಟ
ರ್ ಗಳು ,ಪ್ರಭಾವಿಗಳಿಂದ ದುರುಪಯೋಗವಾಗಬಾರದು, ನ್ಯಾಯಾಂಗ ವ್ಯವಸ್ಥೆಯನ್ನು ಸರ್ಕಾರ ಚುರುಕುಗೊಳಿಸಬೇಕು ಎಂಬದಷ್ಟೇ ನನ್ನ ಉದ್ದೇಶವಾಗಿತ್ತುಎಂದು ಹೇಳಿದ್ದಾರೆ.

ನಾನೂ ಒಂದು ಹೆಣ್ಣು ಮಗುವಿನ ತಂದೆ, ಅತ್ಯಾಚಾರಿಗಳ ಪರವಾಗಿ ಮಾತನಾಡಿದೆ ಎಂದು ಬಿಂಬಿಸುವಂತಹ ಹ್ಯೇಯ ಮನಸಿನ ಜನ ಈ ಸಮಾಜದಲ್ಲಿ( ಕೆಲವರು ನನ್ನ ಜೊತೆಗೇ ) ಇದ್ದಾರಲ್ಲ ಎಂದು ನೋವಾಗುತ್ತಿದೆ ಎಂದು ನೋವಿನಿಂದ ಉಪೇಂದ್ರ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com