ಕೆಜಿಎಫ್ ಚಿತ್ರದ ಮೂಲಕ ಇಡೀ ಭಾರತೀಯ ಚಿತ್ರರಂಗವೆೇ ಕನ್ನಡ ಚಿತ್ರರಂಗದತ್ತತ ತಿರುಗಿ ನೋಡುವಂತೆ ಮಾಡಿದ್ದ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ಜೊತೆಗೆ ನಿರ್ಮಾಣಕ್ಕೂ ಇಳಿದಿದ್ದಾರೆ.
ಮೊದಲ ಬಾರಿಗೆ ಪ್ರಶಾಂತ್ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅಂದ್ಹಾಗೆ ಪ್ರಶಾಂತ್ ಚೊಚ್ಚಲ ಸಿನಿಮಾ ನಿರ್ಮಾಣ ಮಾಡುತ್ತಿರುವುದು ನಟ ಶ್ರೀಮುರಳಿಗಾಗಿ. ಅಂದರೆ ಶ್ರೀಮುರಳಿ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಶ್ರೀಮುರಳಿ ಮುಂದಿನ ಸಿನಿಮಾಗೆ ಪ್ರಶಾಂತ್ ಬಂಡವಾಳ ಹೂಡುವುದರ ಜೊತೆಗೆ ಕಥೆಯನ್ನು ಬರೆದಿದ್ದಾರೆ.
ಪ್ರಶಾಂತ್ ನೀಲ್ ಚೊಚ್ಚಲ ನಿರ್ಮಾಣ ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್-2 ಚಿತ್ರದ ನಿರ್ದೇಶನದ ಜೊತೆಗೆ ಸಿನಿಮಾ ನಿರ್ಮಾಣ ಕೂಡ ಮಾಡಲು ಸಜ್ಜಾಗಿದ್ದಾರೆ. ಅಂದ್ಹಾಗೆ ಪ್ರಶಾಂತ್, ಶ್ರೀಮುರಳಿ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ.
ಪ್ರಶಾಂತ್ ನೀಲ್ ಮೊದಲ ಬಾರಿಗೆ ನಿರ್ದೇಶನ ಮಾಡಿದ್ದು ಕೂಡ ಶ್ರೀಮುರಳಿಗೆ. 'ಉಗ್ರಂ' ಮೂಲಕ ನಿರ್ದೇಶಕರಾಗಿ ಎಂಟ್ರಿ ಕೊಟ್ಟ ಪ್ರಶಾಂತ್ ಈಗ ಶ್ರೀಮುರಳಿ ಸಿನಿಮಾಗೆ ಬಂಡವಾಳ ಹೂಡುವ ಮೂಲಕ ನಿರ್ಮಾಕರನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಡಾ. ಸುರಿ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ.
Advertisement