ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿ, ಟಾಸ್ಕ್ ಹೊರತಾಗಿಯೂ ಆ್ಯಂಡಿ ನಡೆದುಕೊಂಡ ರೀತಿ ನನಗೆ ಇಷ್ಟವಾಗಲಿಲ್ಲ. ಇತ್ತೀಚೆಗೆ ನಡೆದ ಖಾಸಗಿವಾಹಿನಿ ಶೋದಲ್ಲಿ ಉಂಟಾದ ಅಹಿತಕರ ಘಟನೆಯಿಂದ ದೂರು ದಾಖಲಿಸಲು ನಿರ್ಧರಿಸಿದೆ ಎಂದರು. ಬಿಗ್ಬಾಸ್ ಮನೆಯಲ್ಲಿ ಉಂಟಾಗಿದ್ದ ಅಹಿತಕರ ಘಟನೆಯ ಕುರಿತು ಹೇಳಿಕೊಂಡು ದೂರು ನೀಡುವ ವಿಚಾರವನ್ನು ಪ್ರೊಗ್ರಾಮ್ ಪ್ರೊಡ್ಯೂಸರ್ ಗುರುದಾಸ್ ಶಣೈ ತಿಳಿಸಿದ್ದೆ. ಅವರು ಕೂಡ ಬೆಂಬಲ ಕೊಡುತ್ತೇವೆಂದು ತಿಳಿಸಿದ್ದರು. ಹೀಗಾಗಿ ಬಿಗ್ಬಾಸ್ ಮನೆಯಿಂದ ಹೊರಬಂದು ಯೋಚನೆ ಮಾಡಿಯೇ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ.