ನಿರ್ಮಾಪಕ ವಿಜಯ್ ಕಿರಗಂದೂರ್, ಪುನೀತ್ ಮನೆಯಲ್ಲಿ ಶೋಧ ಮುಕ್ತಾಯವಾಗಿದ್ದು, ನಟ ಶಿವರಾಜ್ ಕುಮಾರ್ ಮನೆಯಲ್ಲಿ ಇಂದು ಬೆಳಗ್ಗೆಯವರೆಗೂ ಪರಿಶೀಲನಾ ಕಾರ್ಯ ಮುಂದುವರಿಯಿತು. ಪುನೀತ್ ರಾಜ್ಕುಮಾರ್ ಮನೆಯಲ್ಲಿನ ಶೋಧ ಕಾರ್ಯ ಶುಕ್ರವಾರ ರಾತ್ರಿ 11.30ಕ್ಕೆ ಅಂತ್ಯಗೊಂಡಿದೆ. ಆದರೆ ಯಶ್ ಮತ್ತು ಸುದೀಪ್ ಮನೆಯಲ್ಲಿ ಪರಿಶೀಲನೆ ಮುಂದುವರಿಯಲಿದೆ. ಜೊತೆಗೆ ನಿರ್ಮಾಪಕರಾದ ಸಿ.ಆರ್.ಮನೋಹರ್, ರಾಕ್ಲೈನ್ ವೆಂಕಟೇಶ್, ಜಯಣ್ಣ ಮನೆಯಲ್ಲಿ ಇಂದು ಕೂಡ ಪರಿಶೀಲನೆ ಮುಂದುವರಿಯಲಿದೆ.