ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ದರ್ಶನ್ ಅವರು ಕುರುಕ್ಷೇತ್ರ ಚಿತ್ರದ ಕುರಿತಂತೆ ಮಾತನಾಡಿದರು. ನನಗೆ ಅಭಿಮಾನಿಗಳೇ ಸೆಲೆಬ್ರಿಟಿ. ಹೀಗಾಗಿ ಕುರುಕ್ಷೇತ್ರ ಚಿತ್ರದ ಕುರಿತು ತಪ್ಪಾಗಿ ಯಾರು ಮಾತನಾಡಬಾರದು. ಕುರುಕ್ಷೇತ್ರ ಚಿತ್ರದಲ್ಲಿ ಅಪ್ಪಾಜಿ(ಅಂಬರೀಶ್), ರವಿಚಂದ್ರನ್, ಅರ್ಜುನ್ ಸರ್ಜಾ ಮತ್ತು ನಿಖಿಲ್ ಕುಮಾರಸ್ವಾಮಿ ಸೇರಿದಂತೆ ದೊಡ್ಡ ತಾರಾಗಣವಿದೆ. ಹೀಗಾಗಿ ಇಲ್ಲಿ ಎಲ್ಲಾ ನಟರಿಗೂ ಸಮಾನ ಸ್ಥಾನಗಳಿರುತ್ತವೆ.