ಕನ್ನಡವನ್ನು ಪ್ರಥಮ ಭಾಷೆಯನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಸಾಹಿತಿಗಳು ಲೇಖಕರು ಬರಹಗಾರರು ಸರ್ಕಾರವನ್ನು ಒತ್ತಾಯಿಸಿದ್ದರು, ಆದರೆ ಸರ್ಕಾರ ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿರಲಿಲ್ಲ, ಇದೇ ವೇಳೆ ಕನ್ನಡದ ಹಿರಿಯ ನಟ ಡಾ.ರಾಜ್ ಕುಮಾರ್ ಕೂಡ ಗೋಕಾಕ್ ಹೋರಾಟಕ್ಕೆ ತಮ್ಮ ಬೆಂಬಲ ವ್ಯಕ್ತ ಪಡಿಸಿದ್ದರು. ಆ ನಂತರ ಸರ್ಕಾರ ಈ ಪ್ರಸ್ತಾವನೆಯನ್ನು ಒಪ್ಪಿಕೊಂಡಿತ್ತು ಎಂದು ನಾಗೇಂದ್ರ ತಿಳಿಸಿದ್ದಾರೆ.