ಲಂಡನ್​ನಲ್ಲಿ ಶಿವಣ್ಣ ಭುಜದ ಶಸ್ತ್ರಚಿಕಿತ್ಸೆ ಯಶಸ್ವಿ: ವಿಶ್ರಾಂತಿ, ನಾಳೆ ಜನ್ಮದಿನ ಆಚರಣೆಗೆ ಅಲಭ್ಯ!

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಅಭಿಮಾನಿಗಳ ಹಾರೈಕೆ ಫಲಿಸಿದ್ದು, ಲಂಡನ್ ನಲ್ಲಿ ಅವರ ಭುಜದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಶುಕ್ರವಾರ ಜುಲೈ 12ರಂದು ಅವರ ಜನ್ಮದಿನಕ್ಕೂ...
ಶಿವರಾಜ್ ಕುಮಾರ್
ಶಿವರಾಜ್ ಕುಮಾರ್
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಅಭಿಮಾನಿಗಳ ಹಾರೈಕೆ ಫಲಿಸಿದ್ದು, ಲಂಡನ್ ನಲ್ಲಿ ಅವರ ಭುಜದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ  ಶುಕ್ರವಾರ ಜುಲೈ 12ರಂದು ಅವರ ಜನ್ಮದಿನಕ್ಕೂ ಮೊದಲೇ ಬಂದಿರುವ ಈ ಸಿಹಿ ಸುದ್ದಿ ಅಭಿಮಾನಿಗಳಿಗೆ ನೆಮ್ಮದಿ ತಂದಿದೆ ಆದರೆ ಬರ್ತ್ ಡೇ ಗೆ ಲಭ್ಯವಿರುವುದಿಲ್ಲ ಎಂಬ ನೋವು ಕಾಡುತ್ತಿದೆ
ಕಳೆದ ಆರು ತಿಂಗಳಿನಿಂದ ಭುಜದ ನೋವಿನಿಂದ ಬಳಲುತ್ತಿದ್ದ ಶಿವಣ್ಣ ಕೆಲ ದಿನಗಳ ಹಿಂದೆಯಷ್ಟೇ, ಶಸ್ತ್ರ ಚಿಕಿತ್ಸೆಗಾಗಿ ಲಂಡನ್​ಗೆ ತೆರಳಿದ್ದರು. ಬುಧವಾರ ಶಿವಣ್ಣನವರಿಗೆ ಶಸ್ತ್ರ ಚಿಕಿತ್ಸೆ ನಡೆದು ಆಫರೇಶನ್​ ಯಶಸ್ವಿಯಾಗಿದ್ದು, ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆಯಂತೆ.
ಶಿವಣ್ಣ ಆರೋಗ್ಯವಾಗಿದ್ದಾರೆ, ವೈದ್ಯರು ಒಂದು ತಿಂಗಳು ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದು ಶಿವಣ್ಣ ಆಪ್ತ ಹಾಗೂ ನಿರ್ಮಾಪಕ ಕೆ.ಪಿ.ಶ್ರೀಕಾಂತ್​ ಟ್ವಿಟರ್​ ಖಾತೆಯ ಮೂಲಕ ಸ್ಪಷ್ಟ ಪಡಿಸಿದ್ದಾರೆ.
ಶಿವರಾಜ್ ಕುಮಾರ್ ಜೊತೆಗೆ ಪತ್ನಿ ಗೀತಾ ಶಿವರಾಜಕುಮಾರ್ ಹಾಗೂ ಪುತ್ರಿ ನಿವೇದಿತಾ ಕೂಡ ಲಂಡನ್​ಗೆ ತೆರಳಿದ್ದಾರೆ ಪುನೀತ್ ರಾಜಕುಮಾರ್ ಕೂಡ ಅಣ್ಣನ ಆರೋಗ್ಯ ನೋಡಿಕೊಳ್ಳುತ್ತಿದ್ದಾರೆ.
ಕಳೆದ 6 ತಿಂಗಳ ಹಿಂದೆ ಪ್ರವಾಸಕ್ಕೆ ತೆರಳಿದ್ದ ವೇಳೆ ಹಿಮದಲ್ಲಿ ಜಾರಿ ಬಿದ್ದು ಶಿವಣ್ಣ ಗಾಯಗೊಂಡಿದ್ದು, ಆ ವೇಳೆ ಅವರಿಗೆ ಭುಜದ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಶೂಟಿಂಗ್​ ಮುಗಿಸಿದ ಶಿವಣ್ಣ ಹುಟ್ಟುಹಬ್ಬ ಆಚರಣೆಯನ್ನು ಕೈಬಿಟ್ಟು ಆಪರೇಶನ್​ಗಾಗಿ ಲಂಡನ್​ಗೆ ತೆರಳಿದ್ದರು. 
ಇನ್ನು ಶಿವರಾಜ್ ಕುಮಾರ್ ಅವರು ಶಸ್ತ್ರಚಿಕಿತ್ಸೆಗೆ ತೆರಳುವ ಮುನ್ನ ಬಾಲಿವುಡ್ ನಟ ಅರ್ಬಾಜ್ ಖಾನ್ ಅವರನ್ನು ಭೇಟಿ ಮಾಡಿದ್ದರು ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com