ಚಿತ್ರತಂಡದಿಂದ ನನಗೆ ಸರಿಯಾ ರೀತಿಯಲ್ಲಿ ಬೆಂಬಲ ಸಿಗಲಿಲ್ಲ ಎಂದು ರಮೇಶ್ ಬೇಸರಗೊಂಡಿದ್ದಾರೆ. ಕೆಲವು ಕಲಾವಿದರು ಮತ್ತು ತಂತ್ರಜ್ಞರು ಸಾಮಾಜಿಕ ಮಾಧ್ಯಮಗಳಲ್ಲಿ ಮಾತ್ರ ಚಿತ್ರದ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ. ನಾನೊಬ್ಬನೇ ಚಿತ್ರದ ಬಗ್ಗೆ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದೇನೆ. ಆದರೆ ಯಾರ ಬಗ್ಗೆಯೂ ದೂರು ನೀಡಲು ನನಗೆ ಸಮಯವಿಲ್ಲ ಎಂದು ರಮೇಶ್ ಹೇಳಿದ್ದಾರೆ.