ಅದ್ಭುತ ಆತ್ಮ ಇನ್ನಿಲ್ಲವೆಂದು ಒಪ್ಪಿಕೊಳ್ಳಲು ಸಾಧ್ಯವಾಗ್ತಿಲ್ಲ: ಕಂಬನಿ ಮಿಡಿದ ಕಿಚ್ಚ ಸುದೀಪ್

ಪುನೀತ್ ಆರ್ಯ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ. ಈ ಅದ್ಭುತ ಆತ್ಮ ಇನ್ನಿಲ್ಲ ಎಂದು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ನಟ ಕಿಚ್ಚ ಸುದೀಪ್ ಟ್ವೀಟ್ ...
ಸುದೀಪ್
ಸುದೀಪ್
ಬೆಂಗಳೂರು: ಪುನೀತ್ ಆರ್ಯ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ. ಈ ಅದ್ಭುತ ಆತ್ಮ ಇನ್ನಿಲ್ಲ ಎಂದು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ನಟ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.
ಕಿಚ್ಚ ಸುದೀಪ್ ಅಭಿಮಾನಿ ಸಂಘದ ತುಮಕೂರು ಜಿಲ್ಲಾ ಮಾಜಿ ಉಪಾಧ್ಯಕ್ಷರಾಗಿದ್ದ ಪುನೀತ್ ಶನಿವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಹಲವು ವರ್ಷಗಳಿಂದ ಪುನೀತ್ ನನ್ನ ಅಭಿಮಾನಿ ಹಾಗೂ ಸಹೋದರರಾಗಿದ್ದರು. ಅವರ ನಿಧನದಿಂದ ತುಂಬಾ ಬೇಸರವಾಗಿದೆ ಎಂದು ಬರೆದಿದ್ದಾರೆ.
ನಾನು ಪುನೀತ್‍ರನ್ನು ಮಿಸ್ ಮಾಡಿಕೊಳ್ಳುತ್ತೇನೆ ಎಂದು ಬರೆದುಕೊಳ್ಳುವ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ. ಅದ್ಭುತ ಆತ್ಮ ಇನ್ನಿಲ್ಲ ಎಂದು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಎಂದು ಹೇಳಿದ್ದಾರೆ. ಶನಿವಾರ ರಾತ್ರಿ ತುಮಕೂರಿನ ಹನುಮಂತಪುರದ ಪಂಜಾಬಿ ಡಾಬಾ ಬಳಿ ಪುನೀತ್ ಬೈಕ್ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com