ತಂಡವು ಸೆಪ್ಟೆಂಬರ್ 27ಕ್ಕೆ ಚಿತ್ರವನ್ನು ತೆರೆಗೆ ತರಲು ಯೋಜಿಸಿದ್ದು . ಇದು ನಿರ್ಮಾಪಕ ಸುಪ್ರೀತ್ ಪಾಲಿಗೆ ಚೊಚ್ಚಲ ಚಿತ್ರವಾಗಿದೆ.ಈ ಚಿತ್ರದಲ್ಲಿ ಶ್ರೀಲೀಲಾ ಶ್ರೀಮುರಳಿ ಜತೆಗಾರ್ತಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೂ ವಿಶೇಷವೆಂದರೆ ಸಾಯಿ ಕುಮಾರ್, ರವಿಶಂಕರ್ ಮತ್ತು ಅಯ್ಯಪ್ಪ ಶರ್ಮಾ ಮೂವರು ಸಹೋದರರು ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಅವಿನಾಶ್, ಶರತ್ ಲೋಹಿತಾಶ್ವ, ರಾಜು ವಾಡೆ, ಮನಮೋಹನ್, ಉಗ್ರಂ ಮಂಜು, ದೀಪಕ್ ಸಹ ಚಿತ್ರದ ನಟನಾವರ್ಗದಲ್ಲಿದ್ದಾರೆ.